ತೆಲಂಗಾಣ ರಾಷ್ಟ್ರೀಯ ಸಮಿತಿಯ ನಾಯಕಿ ಕೆ.ಕವಿತಾ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಅಧಿಕಾರವಿಲ್ಲದಿದ್ದಾಗಲೇ ಕಾಂಗ್ರೆಸ್ ಗೆ ರೈತರ ನೆನಪಾಗುವುದು: ಟಿಆರ್ ಎಸ್ ವ್ಯಂಗ್ಯ

ಹಲವು ವರ್ಷಗಳಿಂದ ತೆಲಂಗಾಣ ಮಾತ್ರವಲ್ಲದೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿತ್ತು. ಅಂದು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಗೆ ರೈತರ ನೆನಪಾಗಿರಲಿಲ್ಲ. ಇದೀಗ ಅಧಿಕಾರವಿಲ್ಲದ ಕಾರಣ ಕಾಂಗ್ರೆಸ್ ಗೆ ರೈತರ ನೆನಪಾಗುತ್ತಿದೆ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ...

ನವದೆಹಲಿ: ಹಲವು ವರ್ಷಗಳಿಂದ ತೆಲಂಗಾಣ ಮಾತ್ರವಲ್ಲದೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿತ್ತು. ಅಂದು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಗೆ ರೈತರ ನೆನಪಾಗಿರಲಿಲ್ಲ. ಇದೀಗ ಅಧಿಕಾರವಿಲ್ಲದ ಕಾರಣ ಕಾಂಗ್ರೆಸ್ ಗೆ ರೈತರ ನೆನಪಾಗುತ್ತಿದೆ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ ಕಾಂಗ್ರೆಸ್ ಕುರಿತು ಗುರುವಾರ ವ್ಯಂಗ್ಯವಾಡಿದೆ.

ರೈತರ ಆತ್ಮಹತ್ಯೆ ಹಾಗೂ ಅವರ ಸಮಸ್ಯೆ ದೇಶದ ಸಮಸ್ಯೆಯಾಗಿದೆ. ಈ ಸಮಸ್ಯೆಗಳು ಪ್ರಾದೇಶಿಕ ರೈತರಿಗೆ ಸಾಮಾನ್ಯವಾಗಿ ಹೋಗಿದೆ. ಭಾರತದಲ್ಲಿ ಹಲವು ವರ್ಷಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ರೈತರ ಆತ್ಮಹತ್ಯೆ ಹಾಗೂ ಅವರ ಸಮಸ್ಯೆಗಳನ್ನು ಅರಿಯುವ ಪ್ರಯತ್ನವನ್ನು ಎಂದಿಗೂ ಮಾಡಿರಲಿಲ್ಲ. ಇದೀಗ ಸೋತು ಸುಣ್ಣವಾಗಿರುವ ಸಂದರ್ಭದಲ್ಲಿ ರೈತರ ಸಮಸ್ಯೆ ಹಿಡಿದು ಸಾಂತ್ವನ, ಪಾದಯಾತ್ರೆಯೆಂದು ಹೇಳುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡುತ್ತಿದೆ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿಯ ನಾಯಕಿ ಕೆ.ಕವಿತಾ ಹೇಳಿದ್ದಾರೆ.

ತೆಲಂಗಾಣ ರಾಷ್ಟ್ರೀಯ ಪಕ್ಷ ಅಧಿಕಾರಕ್ಕೆ ಬಂದು ಕೇವಲ 1 ವರ್ಷವಾಗಿದೆಯಷ್ಟೇ. ಈ ಅಲ್ಪ ಅವಧಿಯಲ್ಲೇ ರೈತರಿಗೆ ಗೊಬ್ಬರ, ನೀರು, ವಿದ್ಯುತ್ ಸೇರಿದಂತೆ ಸಾಕಷ್ಟು ಅನುಕೂಲಗಳನ್ನು ಮಾಡಿದೆ. ಈ ವಿಷಯದ ಕುರಿತಂತೆ ಚರ್ಚೆಗೆ ಬೇಕಿದ್ದರೂ ನಾವು ತಯಾರಿದ್ದೇವೆ ಎಂದು ಹೇಳಿದ್ದಾರೆ.

ಈ ಹಿಂದೆ ದೇಶದ ನಾನಾ ಕಡೆಗಳಲ್ಲಿ ಅಕಾಲಿಕ ಮಳೆ ಉಂಟು ಮಾಡಿದ ಬೆಳೆ ನಷ್ಟದಿಂದ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂತ್ರಸ್ಥರಿಗೆ ಸಾಂತ್ವನ ಹೇಳುವ ಸಲುವಾಗಿ ರಾಹುಲ್ ಪಂಜಾಬ್ ನಾದ್ಯಂತ ಪಾದಯಾತ್ರೆ ಕೈ ಗೊಂಡಿದ್ದರು. ಇದೀಗ ತೆಲಂಗಾಣದ ರೈತರಿಗೆ ಸಾಂತ್ವನ ಹೇಳುವ ಸಲುವಾಗಿ 2 ದಿನಗಳ ಕಾಲ ರಾಹುಲ್ ತೆಲಂಗಾಣಕ್ಕೆ ಭೇಟಿ ನೀಡಿಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT