ಕಾಬುಲ್ ದಾಳಿ 
ದೇಶ

ಕಾಬುಲ್ ಭಯೋತ್ಪಾದಕ ದಾಳಿ: 4 ಭಾರತೀಯರು ಸೇರಿ 14 ಮಂದಿ ಸಾವು

ಅಫ್ಘಾನಿಸ್ಥಾನದ ರಾಜಧಾನಿಯ ಅತಿಥಿಗೃಹವೊಂದರಲ್ಲಿ ವಿದೇಶಿಯರ ಔತಣಕೂಟದ ವೇಳೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ನಾಲ್ವರು...

ಕಾಬುಲ್: ಅಫ್ಘಾನಿಸ್ಥಾನದ ರಾಜಧಾನಿಯ ಅತಿಥಿಗೃಹವೊಂದರಲ್ಲಿ ವಿದೇಶಿಯರ ಔತಣಕೂಟದ ವೇಳೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ನಾಲ್ವರು ಭಾರತೀಯರೂ ಸೇರಿದಂತೆ ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ.

ಈ ದಾಳಿಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಹಾಗೂ 9 ಮಂದಿ ವಿದೇಶಿಗರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.

ಮೂರರಿಂದ ನಾಲ್ವರು ಶಂಕಿತ ತಾಲಿಬಾನ್ ಉಗ್ರ ಸಂಘಟನೆಗೆ ಸೇರಿದ ಬಂಧೂಕುದಾರಿಗಳು ಗುಂಡಿನ ದಾಳಿ ನಡೆಸಿದ್ದು, ಇಂದು ಉಗ್ರರ ವಿರುದ್ಧ ಆಫ್ಘಾನ್ ಪೊಲೀಸರು ನಡೆಸಿದ ಏಳು ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ರಾತ್ರಿ ಬಂಧೂಕುದಾರಿಗಳು ಪಾರ್ಕ್ ಪ್ಯಾಲೇಸ್ ಹೋಟೆಲ್ಲಿನ ಮೇಲೆ ಗುಂಡಿನ ದಾಳಿ ನಡೆಸಿದ ಎಂದು ಕಾಬುಲ್ ಪೊಲೀಸ್ ಮುಖ್ಯ ಕಾರ್ಯದರ್ಶು ಅಬ್ದುಲ್ ರೆಹಮಾನ್ ರಹೀಮಿ ತಿಳಿಸಿದ್ದರು.

ಇದೇ ವೇಳೆಗೆ ಎರಡು ಸ್ಫೋಟಗಳು ಸಂಭವಿಸಿದ್ದು ಕೇಳಿ ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾಗಿ ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಪೊಲೀಸರು ಹಲವು ಅತಿಥಿಗೃಹದಲ್ಲಿದ್ದ ಸುಮಾರು ೨೦ ಜನರನ್ನು ರಕ್ಷಿಸಿದರು ಎಂದು ತಿಳಿದು ಬಂದಿದೆ. ಪೊಲೀಸ್ ಮತ್ತು ಭಯೋತ್ಪಾದಕನ ನಡುವಿನ ಕಾಳಗ ಗುರುವಾರ ಬೆಳೆಗ್ಗೆ ಅಂತ್ಯವಾಗಿದೆ ಎಂದು ಕೂಡ ತಿಳಿದುಬಂದಿದೆ.

ಈ ದಾಳಿಗೆ ಯಾವುದೇ ಭಯೋತ್ಪಾದಕ ಸಂಘಟನೆ ಹೊಣೆ ಹೊತ್ತಿಲ್ಲ. ಆದರೆ ಈ ಹಿಂದೆ ತಾಲಿಬಾನ್ ಸಂಘಟನೆ ಇತರ ಅತಿಥಿಗೃಹಗಳ ಮೇಲೆ ದಾಳಿ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT