ಡಿಎಂಕೆ ಮುಖಸ್ಥ ಕರುಣಾನಿಧಿ 
ದೇಶ

ಸರ್ಕಾರಿ ಜಾಹೀರಾತು ಫೋಟೋ ಆದೇಶ: ಸುಪ್ರೀಂ ವಿರುದ್ಧ ಕಿಡಿಕಾರಿದ ಕರುಣಾನಿಧಿ

ಸರ್ಕಾರಕ್ಕೆ ಸಂಬಂಧಿಸಿದ ಮುದ್ರಣ ಜಾಹೀರಾತಿನಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಫೋಟೋ ಹೊರತು ಪಡಿಸಿ ಬೇರಾವುದೇ ರಾಜಕಾರಣಿಸ ಚಿತ್ರವನ್ನು ಪ್ರಕಟಿಸಬಾರದು ಎಂಬ ಸುಪ್ರೀಂಕೋರ್ಟ್ ನ ಆದೇಶ...

ನವದೆಹಲಿ: ಮುದ್ರಣ ಜಾಹೀರಾತುಗಳಲ್ಲಿ ಸರ್ಕಾರಕ್ಕೆ ಸಂಬಂಧಿಸಿ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಫೋಟೋ ಹೊರತು ಪಡಿಸಿ ಬೇರಾವುದೇ ರಾಜಕಾರಣಿಗಳ ಚಿತ್ರವನ್ನು ಪ್ರಕಟಿಸಬಾರದು ಎಂಬ ಸುಪ್ರೀಂಕೋರ್ಟ್ ನ ಆದೇಶದ ವಿರುದ್ಧ ಡಿಎಂಕೆ ಮುಖಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕಿಡಿಕಾರಿದ್ದಾರೆ.

ಸುಪ್ರೀಂಕೋರ್ಟ್ ನ ಈ ಆದೇಶ ರಾಜ್ಯದ ಹಕ್ಕನ್ನು ಕಿತ್ತುಕೊಂಡಂತಿದೆ. ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳು ಒಂದೇ ಹಂತದಲ್ಲಿರುತ್ತಾರೆ. ರಾಜ್ಯಗಳಲ್ಲಿ ಪ್ರಧಾನಮಂತ್ರಿಗಿಂತ ಮುಖ್ಯಮಂತ್ರಿಗಳಿಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಸಾರ್ವಜನಿಕರಿಗೆ ಮಾಹಿತಿ ಅಥವಾ ಸಂದೇಶ ನೀಡುವಾಗ ಜವಾಬ್ದಾರಿಯುತರಾಗಿರುವ ಮುಖ್ಯಮಂತ್ರಿಯ ಫೋಟೋ ಹಾಕಿದರೆ ಅದು ಹೆಚ್ಚು ಜನರಿಗೆ ತಲುಪುತ್ತದೆ. ಜನರಿಗೂ ಇದು ಸುಲಭವಾಗಿ ಅರ್ಥೈಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆರಿಗೆದಾರರ ಹಣವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕರ ಹಣವನ್ನು ರಾಜಕಾರಣಿಗಳು ಸರ್ಕಾರಿ ಜಾಹೀರಾತುಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಸರ್ಕಾರಿ ಜಾಹೀರಾತು ಪ್ರಕಟಣೆ ಕುರಿತಂತೆ ಕಠಿಣ ನಿಯಮ ವಿಧಿಸಬೇಕೆಂದು ಎನ್ ಜಿಒ ಸಂಸ್ಥೆಯೊಂದು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.

ಈ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಿ ಜಾಹೀರಾತಿನಲ್ಲಿ ಮುಖ್ಯಮಂತ್ರಿ, ಗವರ್ನರ್ ಅಥವಾ ಯಾವುದೇ ರಾಜ್ಯ ಸಚಿವರ ಫೋಟೋ ಬಳಸುವಂತಿಲ್ಲ. ಅದೇ ರೀತಿ ಕೇಂದ್ರದ ಜಾಹೀರಾತುಗಳಲ್ಲಿ ಪ್ರಧಾನಮಂತ್ರಿ ಹೊರತು ಪಡಿಸಿ, ಕೇಂದ್ರ ಸಚಿವರ ಯಾವುದೇ ಫೋಟೋಗಳನ್ನು ಬಳಸುವಂತಿಲ್ಲ ಎಂದು ಹೇಳಿತ್ತು. ಅಲ್ಲದೇ, ಹೊಸ ಮಾರ್ಗಸೂಚಿ ಉಲ್ಲಂಘಿಸದಂತೆ ತ್ರಿಸದಸ್ಯ ಸಮಿತಿಯೊಂದನ್ನು ಸುಪ್ರೀಂಕೋರ್ಟ್ ಬುಧವಾರ ನೇಮಕ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT