ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ರಾಹುಲ್ ಕಠಿಣ ಶ್ರಮದಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಎನ್ ಸಿಪಿ

ರಾಹುಲ್ ಗಾಂಧಿಯ ಪಂಜಾಬ್ ಹಾಗೂ ತೆಲಂಗಾಣ ಭೇಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಬಲನೀಡಲಿದ್ದು, ರಾಹುಲ್ ಪರಿಶ್ರಮದಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗುರುವಾರ ಹೇಳಿದೆ...

ನವದೆಹಲಿ: ರಾಹುಲ್ ಗಾಂಧಿಯ ಪಂಜಾಬ್ ಹಾಗೂ ತೆಲಂಗಾಣ ಭೇಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಬಲನೀಡಲಿದ್ದು, ರಾಹುಲ್ ಪರಿಶ್ರಮದಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು  ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗುರುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕ ತರಿಕ್ ಅನ್ವರ್, ರಾಹುಲ್ ಗಾಂಧಿ ಇದೇ ರೀತಿ ಕಠಿಣ ಶ್ರಮ ಪಟ್ಟರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ನನಗೆ ನಂಬಿಕೆಯಿಂದೆ. ರಾಹುಲ್ ಅವರ ಪ್ರಯತ್ನದಲ್ಲಿ ಯಾವುದೇ ತಪ್ಪಿಲ್ಲ. ರಾಹುಲ್ ಪಾದಯಾತ್ರೆ, ತೆಲಂಗಾಣ ಭೇಟಿಗಳು ಕಾಂಗ್ರೆಸ್ ಪಕ್ಷಕ್ಕೆ ಲಾಭ ನೀಡಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ದೇಶದ ನಾನಾ ಕಡೆಗಳಲ್ಲಿ ಅಕಾಲಿಕ ಮಳೆ ಉಂಟು ಮಾಡಿದ ಬೆಳೆ ನಷ್ಟದಿಂದ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂತ್ರಸ್ಥರಿಗೆ ಸಾಂತ್ವನ ಹೇಳುವ ಸಲುವಾಗಿ ರಾಹುಲ್ ಪಂಜಾಬ್ ನಾದ್ಯಂತ ಪಾದಯಾತ್ರೆ ಕೈ ಗೊಂಡಿದ್ದರು. ಇದೀಗ ರಾಹುಲ್ ತೆಲಂಗಾಣಕ್ಕೆ ಭೇಟಿ ನೀಡಿಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT