ಸುಬ್ರತಾ ರಾಯ್ 
ದೇಶ

ಸುಬ್ರತಾ ರಾಯ್‌ ಜಾಮೀನು ಆದೇಶವನ್ನು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಹೂಡಿಕೆದಾರರಿಗೆ ವಂಚಿಸಿದ ಆರೋಪದಡಿ ಜೈಲು ಸೇರಿರುವ ಸಹರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ಅವರ ಜಾಮೀನು ಆದೇಶವನ್ನು ಸುಪ್ರೀಂಕೋರ್ಟ್...

ನವದೆಹಲಿ: ಹೂಡಿಕೆದಾರರಿಗೆ ವಂಚಿಸಿದ ಆರೋಪದಡಿ ಜೈಲು ಸೇರಿರುವ ಸಹರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ಅವರ ಜಾಮೀನು ಆದೇಶವನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದ್ದು, ಮತ್ತೆ ಕೆಲ ದಿನಗಳು ಕಾಲ ಸುಬ್ರತಾ ರಾಯ್ ಜೈಲಿನಲ್ಲೇ ಕಳೆಯಬೇಕಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿರಿಸಿದ್ದು, ದಿನಾಂಕವನ್ನು ಕೋರ್ಟ್ ಪ್ರಕಟಿಸಿಲ್ಲ. ಹೀಗಾಗಿ ಕಳೆದ 1 ವರ್ಷದಿಂದ ಸೆರೆಮನೆ ವಾಸ ಅನುಭವಿಸುತ್ತಿರುವ ಅವರ ಜೈಲು ವಾಸ ಇನ್ನೂ ಮುಂದುವರೆಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯಬೇಕಾದರೆ ಕೂಡಲೇ 10 ಸಾವಿರ ಕೋಟಿ ರುಪಾಯಿಯನ್ನು ಠೇವಣಿಯಾಗಿ ಇಡುವಂತೆ ಕೋರ್ಟ್ ಸಹರಾ ಗ್ರೂಪ್‌ಗೆ ಸೂಚಿಸಿತ್ತು. ಅಷ್ಟು ಮೊತ್ತದ ಹಣವನ್ನು ಠೇವಣಿಯಾಗಿ ಇಡಲು ಸಾಧ್ಯವಿಲ್ಲ. ಕೂಡಲೇ ಅಂದರೆ ಸುಮಾರು 2,500 ಕೋಟಿ ರುಪಾಯಿ ಠೇವಣಿ ಇಡುವುದಾಗಿ ಸಹರಾ ಹೇಳಿತ್ತು. ಇದರಿಂದಾಗಿ ಸುಪ್ರೀಂಕೋರ್ಟ್ ಠೇವಣಿ ಇಡುವವರೆಗೂ ಸುಬ್ರತಾ ರಾಯ್ ಜಾಮೀನು ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ಸಹರಾ ಸಂಸ್ಥೆಯ ಹೂಡಿಕೆದಾರರ 20 ಸಾವಿರ ಕೋಟಿ ಮೌಲ್ಯದ ಷೇರುಗಳನ್ನು ಹಿಂದಿರುಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಹೂಡಿಕೆದಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ರೌಡಿ ಶೀಟರ್ 'ಬಿಕ್ಲು ಶಿವು' ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ನಿರೀಕ್ಷಣಾ ಜಾಮೀನು, ನಿರಾಕರಿಸಿದ ಹೈಕೋರ್ಟ್!

ಒಮನ್ ಭೇಟಿ ವೇಳೆ ಮೋದಿ ಹೊಸ ಸ್ಟೈಲ್ ಬಗ್ಗೆ ಭಾರಿ ಚರ್ಚೆ: ಪ್ರಧಾನಿ ಕಿವಿಗೆ ಧರಿಸಿದ್ದೇನು?

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ, ಬಿಡುಗಡೆ

SCROLL FOR NEXT