ತಿಹಾರ್ ಜೈಲು 
ದೇಶ

ತಿಹಾರ್ ಜೈಲಿನಲ್ಲಿ ಇಬ್ಬರು ಕೈದಿಗಳ ನಿಗೂಢ ಸಾವು

ಹೆಚ್ಚಿನ ಭದ್ರತೆ ಹೊಂದಿರುವ ತಿಹಾರ್ ಜೈಲಿನಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ...

ನವದೆಹಲಿ: ಹೆಚ್ಚಿನ ಭದ್ರತೆ ಹೊಂದಿರುವ ತಿಹಾರ್ ಜೈಲಿನಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಕೊಲೆ ಪ್ರಕರಣ ವಿಚಾರಣೆ ಎದುರಿಸುತ್ತಿದ್ದ ರಿತೇಶ್ ಮಿತ್ತಲ್ ಅಲಿಯಾಸ್ ಶಾಲು(32) ಮತ್ತು ಅಮಿತ್ ಅಲಿಯಾಸ್ ಪಂಡ(26) ಎಂದು ಗುರುತಿಸಲಾಗಿದೆ. ಈ ಇಬ್ಬರು ಕೈದಿಗಳು ಮಾಧಕ ದ್ರವ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಜೈಲು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ರಿತೇಶ್ ಮಿತ್ತಲ್ ಕೊಲೆ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಗಳಿದ್ದು, 11 ವರ್ಷ ಜೈಲಿನಲ್ಲಿ ಕಳೆಯಬೇಕಿತ್ತು. ಮತ್ತೊಬ್ಬ ಕೈದಿ ಅಮಿತ್ ಕೊಲೆ ಯತ್ನ ಆರೋಪದ ಮೇಲೆ ವಿಚಾರಣಾಧೀನ ಕೈದಿಯಾಗಿದ್ದು, ಈ ಇಬ್ಬರನ್ನು ಜೈಲಿನ ಕೊಠಡಿ ಸಂಖ್ಯೆ 8-9ರಲ್ಲಿ ಇಡಲಾಗಿತ್ತು.

ಕೈದಿಗಳ ಪ್ರಕಾರ, ಇಬ್ಬರೂ ಕಳೆದ ರಾತ್ರಿ ಮಾಧಕ ಔಷಧಿಗಳನ್ನು ಸೇವಿಸಿದ್ದರು ಎಂದು ತಿಳಿಸಿದ್ದಾರೆ. ಈ ಇಬ್ಬರ ಸಾವಿನ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT