ಜಯಲಲಿತಾ 
ದೇಶ

ಮೇ 22ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಾ ಪ್ರಮಾಣ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಮೇ 22ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ....

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಮೇ 22ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೇ 22ರಂದು ಬೆಳಗ್ಗೆ 7ಗಂಟೆಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಜಯಲಲಿತಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುತ್ತದೆ. ಬಳಿಕ ಮುಖ್ಯಮಂತ್ರಿ ಓ ಪನ್ನೀರ್ ಸೇಲ್ವಂ ಅವರು ರಾಜ್ಯಪಾಲ ಕೆ.ರೋಶಯ್ಯ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ. ಇದೇ ವೇಳೆ ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಜಯಲಲಿತಾ ಅವರನ್ನು ಆಯ್ಕೆ ಮಾಡಿರುವ ಮಾಹಿತಿಯನ್ನು ಪನ್ನೀರ್ ಸೇಲ್ವಂ ಅವರು ರಾಜ್ಯಪಾಲರಿಗೆ ತಿಳಿಸಲಿದ್ದಾರೆ. ನಂತರ ರಾಜ್ಯಪಾಲರು ಜಯಲಲಿತಾ ಅವರಿಗೆ ನೂತನ ಸರ್ಕಾರ ರಚನೆಗೆ ಆಹ್ವಾನ ನೀಡಲಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ ಮೇ 22ರಂದೇ ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT