ಅರುಣಾ ಶಾನಭಾಗ್ 
ದೇಶ

ಅತ್ಯಾಚಾರ ಸಂತ್ರಸ್ತೆ ನರ್ಸ್ ಅರುಣಾ ಶಾನಭಾಗ್ ಸ್ಥಿತಿ ಗಂಭೀರ, ವೆಂಟಿಲೆಟರ್ ಅವಳಡಿಕೆ

ಕಳೆದ 42 ವರ್ಷಗಳಿಂದ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿರುವ ಅರುಣಾ ರಾಮಚಂದ್ರ ಶಾನಭಾಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು...

ಮುಂಬೈ: ಕಳೆದ 42 ವರ್ಷಗಳಿಂದ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿರುವ ಅರುಣಾ ರಾಮಚಂದ್ರ ಶಾನಭಾಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೆಟರ್ ಅಳವಡಿಸಲಾಗಿದೆ.

ಅತ್ಯಾಚಾರಕ್ಕೊಳಗಾಗಿ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಕೋಣೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರುಣಾ ಶಾನಭಾಗ(68) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ತೀವ್ರ ನಿಗಾ ಘಟಕಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮುಂಬೈನಲ್ಲಿ ನರ್ಸ್ ಆಗಿದ್ದ ಅರುಣಾ ಶಾನಭಾಗ್ ಅವರನ್ನು ಅದೇ ಆಸ್ಪತ್ರೆಯ ವಾರ್ಡ್ ಬಾಯ್ ಆಗಿದ್ದ ಸೋಹನ್ ಲಾಲ್ ಭಟ್ರಾ ವಾಲ್ಮಿಕಿ ಎಂಬಾತ ಆಕೆಯನ್ನು 1973ರಲ್ಲಿ ಭೀಕರವಾಗಿ ಅತ್ಯಾಚಾರಿಸಿದ್ದ ಈ ಘಟನೆಯ ಬಳಿಕ ಅರುಣಾ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಸತತ 42 ವರ್ಷಗಳಿಂದ ಜೀವಚ್ಛವವಾಗಿ ಹಾಸಿಗೆಯಲ್ಲಿ ಮಲಗಿದ್ದಾರೆ. ಈ ದುಷ್ಕೃತ್ಯಕ್ಕೆ ಕಾರಣನಾದ ವಾಲ್ಮಿಕಿಯನ್ನು ಅದೇ ಆಸ್ಪತ್ರೆಯಲ್ಲಿ ನಾಯಿ ಚೈನಿನಿಂದ ನಿಯಂತ್ರಿಸಲಾಗಿದೆ.

ಜೀವಚ್ಛವವಾಗಿ ಮಲಗಿರುವ ಅರುಣಾ ಶಾನಭಾಗ್ ಅವರಿಗೆ ದಯಾಮರಣ ಕರುಣಿಸಬೇಕು ಎಂದು ಪತ್ರಕರ್ತೆ ಪಿಂಕಿ ವಿನಾನಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ 2011ರಲ್ಲಿ ಸುಪ್ರೀಂಕೋರ್ಟ್ ದಯಾಮರಣ ಅರ್ಜಿಯನ್ನು ತಿರಸ್ಕರಿಸಿತ್ತು. ಅರುಣಾರಿಗೆ ದಯಾಮರಣ ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT