ಹೊಂಡಾ ಸಿಟಿ ಕಾರು 
ದೇಶ

ಬಸ್‍ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಹೊಂಡಾ ಸಿಟಿ: ಇಬ್ಬರ ಸಾವು, 6 ಮಂದಿಗೆ ಗಾಯ

ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಎನ್ನಾಗರ ಗೇಟ್‌ ಬಸ್‌ ನಿಲ್ದಾಣದ ಬಳಿ ನಡೆದಿದೆ...

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಎನ್ನಾಗರ ಗೇಟ್‌ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಎನ್ನಾಗರ ಗೇಟ್ ಬಸ್ ನಿಲ್ದಾಣದಲ್ಲಿ 8 ರಿಂದ 10 ಮಂದಿ ಬಸ್ಸಿಗಾಗಿ ಕಾಯುತ್ತಿದ್ದವರು. ಈ ವೇಳೆ ವೇಗವಾಗಿ ಬಂದ ಹೊಂಡಾ ಸಿಟಿ ಕಾರು ಏಕಾಏಕಿ ಜನರ ಮೇಲೆ ಹರಿಯಿತು. ಘಟನೆಯಲ್ಲಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸೂರು ಕಡೆಯಿಂದ ವೇಗವಾಗಿ ಬಂದ ಹೊಂಡಾ ಸಿಟಿ ಕಾರು ಇವರ ಮೇಲೆ ಹರಿದಿದೆ. ಈ ಸಂಬಂಧ ಚಾಲಕ ಕಾರ್ತಿಕ್‍ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದು, ಆತ ಕುಡಿದು ಕಾರು ಚಾಲನೆ ಮಾಡುತ್ತಿದ್ದ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT