ಅರವಿಂದ್ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್-ಗವರ್ನರ್ ಶೀತಲ ಸಮರ ರಾಷ್ಟ್ರಪತಿ ಅಂಗಳಕ್ಕೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಮುಸುಕಿನ ಗುದ್ದಾಟ ಈಗ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ವರೆಗೂ ತಲುಪಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಮುಸುಕಿನ ಗುದ್ದಾಟ ಈಗ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ವರೆಗೂ ತಲುಪಿದೆ.
ಮುಖ್ಯ ಕಾರ್ಯದರ್ಶಿ ನೇಮಕ ವಿಚಾರವಾಗಿ ಏರ್ಪಟ್ಟಿರುವ ಒಳಜಗಳ ಬೀದಿಗೆ ಬಂದಿದ್ದು, ಸಮಸ್ಯೆಗೆ ಇತಿಶ್ರೀ ಹಾಡಲು ಅರವಿಂದ್ ಕೇಜ್ರಿವಾಲ್ ನಾಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಲಿದ್ದಾರೆ.
ಮಂಗಳ ವಾರ ಸಂಜೆ  6 ಗಂಟೆಗೆ ರೈಸಿನಾ ಹಿಲ್ ನಲ್ಲಿ ರಾಷ್ಟ್ರಪತಿ ಅವರನ್ನು ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಲಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನಜೀಬ್ ಜಂಗ್ ಹಿರಿಯ ಅಧಿಕಾರಿ ಶಕುಂತಲಾ ಗ್ಯಾಮ್ಲಿನ್ ಅವರನ್ನು ನೇಮಕ ಮಾಡಿದ್ದರು. ಹೀಗಾಗಿ ಶಕುಂತಲಾ ಗ್ಯಾಮ್ಲಿನ್ ಚಾರ್ಜ್ ತೆಗೆದುಕೊಳ್ಳಲು ಹೋದಾಗ, ಅವರನ್ನು ವಾಪಸ್ ಕಳುಹಿಸಿದ್ದಾರೆ. ಈ ಕುರಿತು ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT