ಅರವಿಂದ್ ಕೇಜ್ರಿವಾಲ್ 
ದೇಶ

ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ: ರಾಷ್ಟ್ರಪತಿ ಭೇಟಿ ಮಾಡಿದ ಕೇಜ್ರಿವಾಲ್

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ

ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ರು.
ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ ನೇಮಕದಲ್ಲಿ ಮೂಗು ತೂರಿಸುತ್ತಿದ್ದಾರೆ.  ದೆಹಲಿ ಆಡಳಿತವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಪ್ರಣಬ್ ಮುಖರ್ಜಿ ಅವರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ದೆಹಲಿಯ ರೈಸಿನಾ ಹಿಲ್ ನಲ್ಲಿ ರಾಷ್ಟ್ರಪತಿಗಳ ಭೇಟಿ ನಂತರ ಮಾಧ್ಯಮಗಳ1ೊಂದಿಗೆ ಮಾತನಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸರ್ಕಾರಕ್ಕೆ ಸಂಬಂಧಪಟ್ಟಿ ಹಲವು ಮಹತ್ವದ ವಿಷಯಗಳನ್ನು ಪ್ರಣಬ್ ಮುಖರ್ಜಿ ಅವರಿಗೆ ವಿವರಿಸಿರುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತರದೇ ಅಧಿಕಾರಿಗಳನ್ನು ನೇಮಿಸುತ್ತಿರುವುದರ ಬಗ್ಗೆಯೂ ರಾಷ್ಟ್ರಪತಿಗಳ ಗಮನಕ್ಕೆ ತಂದಿರುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT