ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಅಧಿಸೂಚನೆ ಹೊರಡಿಸಿದ ಕಾರ್ಯದರ್ಶಿ ಕಚೇರಿಗೆ ಬೀಗ

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಣ ಸಮರ ತಾರಕಕ್ಕೇರಿದೆ. ಆದರೆ ಬಲಿಪಶು ಆಗಿರುವುದು ಮಾತ್ರ ಒಬ್ಬ ಹಿರಿಯ ಸರ್ಕಾರಿ ಅಧಿಕಾರಿ!...

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಣ ಸಮರ ತಾರಕಕ್ಕೇರಿದೆ. ಆದರೆ ಬಲಿಪಶು ಆಗಿರುವುದು ಮಾತ್ರ ಒಬ್ಬ ಹಿರಿಯ ಸರ್ಕಾರಿ ಅಧಿಕಾರಿ!

ಸೋಮವಾರ ನಡೆದ ಅತ್ಯಂತ ಮುಜುಗರಕಾರಿ ಸನ್ನಿವೇಶವೊಂದರಲ್ಲಿ, ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಂದೋ ಮಜುಂದಾರ್ ಎಂದಿನಂತೆ ದೆಹಲಿಯ ತಮ್ಮ ಸೆಕ್ರೆಟರಿಯಟ್ ಕಟ್ಟಡದ ಏಳನೇ ಮಹಡಿಯಲ್ಲಿರುವ ತಮ್ಮ ಕಚೇರಿಗೆ ಹೋದರೆ, ತಮ್ಮ ಕೊಠಡಿಗೆ ಬೀಗ ಜಡಿದಿರುವುದನ್ನು ಕಂಡು ದಂಗಾಗಿದ್ದಾರೆ.

ಕೊಠಡಿಗೆ ಮಾತ್ರವಲ್ಲದೆ ಅವರ ಸುಪರ್ದಿಯ ಇಡೀ ಕಚೇರಿಗೇ ಬೀಗ ಹಾಕಲಾಗಿತ್ತು. ಘಟನೆಯ ಹಿನ್ನೆಲೆ: ದೆಹಲಿ ಸರ್ಕಾರದ ಒಪ್ಪಿಗೆ ಪಡೆಯದೆ ಐಎಎಸ್ ಅಧಿಕಾರಿ ಶಕುಂತಲಾ ಗಾಮ್ಲಿನ್ ಅವರನ್ನು ಪ್ರಭಾರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನಜೀಬ್ ಜಂಗ್ ನೇಮಕ ಮಾಡಿದ್ದು ವಿವಾದವಾಗಿತ್ತು. ಕೇಜ್ರಿವಾಲ್ ಇದನ್ನು ಕಟುವಾಗಿ ವಿರೋಧಿಸಿ, ನೇಮಕವನ್ನು ಪ್ರಶ್ನಿಸಿದ್ದರು.

ನಜೀಬ್ ಜಂಗ್ ಕಳಿಸಿದ್ದ ನೇಮಕಾತಿ ಆದೇಶಕ್ಕೆ ಮಜುಂದಾರ್ ಸಹಿ ಹಾಕಿದ್ದು ಕೇಜ್ರಿವಾಲ್ ಕೆಂಗಣ್ಣಿಗೆ ಕಾರಣವಾಗಿತ್ತು. ಶನಿವಾರದಂದು ಮಜುಂದಾರ್‍ರನ್ನು ಕೇಜ್ರಿವಾಲ್ ಏಕಾಏಕಿ ಹುದ್ದೆಯಿಂದ ತೆಗೆದುಹಾಕಿ ಆದೇಶ ಹೊರಡಿಸಿದ್ದಲ್ಲದೆ ಅವರ ಸ್ಥಾನಕ್ಕೆ ರಾಜೇಂದ್ರ ಕುಮಾರ್‍ರನ್ನು ನೇಮಿಸಿದ್ದರು. ಆದರೆ ಸೋಮವಾರ ಜಂಗ್ ಕೇಜ್ರಿವಾಲ್ ಸರ್ಕಾರದ ಆದೇಶ ತಿರಸ್ಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT