ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಅಧಿಸೂಚನೆ ಹೊರಡಿಸಿದ ಕಾರ್ಯದರ್ಶಿ ಕಚೇರಿಗೆ ಬೀಗ

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಣ ಸಮರ ತಾರಕಕ್ಕೇರಿದೆ. ಆದರೆ ಬಲಿಪಶು ಆಗಿರುವುದು ಮಾತ್ರ ಒಬ್ಬ ಹಿರಿಯ ಸರ್ಕಾರಿ ಅಧಿಕಾರಿ!...

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಣ ಸಮರ ತಾರಕಕ್ಕೇರಿದೆ. ಆದರೆ ಬಲಿಪಶು ಆಗಿರುವುದು ಮಾತ್ರ ಒಬ್ಬ ಹಿರಿಯ ಸರ್ಕಾರಿ ಅಧಿಕಾರಿ!

ಸೋಮವಾರ ನಡೆದ ಅತ್ಯಂತ ಮುಜುಗರಕಾರಿ ಸನ್ನಿವೇಶವೊಂದರಲ್ಲಿ, ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಂದೋ ಮಜುಂದಾರ್ ಎಂದಿನಂತೆ ದೆಹಲಿಯ ತಮ್ಮ ಸೆಕ್ರೆಟರಿಯಟ್ ಕಟ್ಟಡದ ಏಳನೇ ಮಹಡಿಯಲ್ಲಿರುವ ತಮ್ಮ ಕಚೇರಿಗೆ ಹೋದರೆ, ತಮ್ಮ ಕೊಠಡಿಗೆ ಬೀಗ ಜಡಿದಿರುವುದನ್ನು ಕಂಡು ದಂಗಾಗಿದ್ದಾರೆ.

ಕೊಠಡಿಗೆ ಮಾತ್ರವಲ್ಲದೆ ಅವರ ಸುಪರ್ದಿಯ ಇಡೀ ಕಚೇರಿಗೇ ಬೀಗ ಹಾಕಲಾಗಿತ್ತು. ಘಟನೆಯ ಹಿನ್ನೆಲೆ: ದೆಹಲಿ ಸರ್ಕಾರದ ಒಪ್ಪಿಗೆ ಪಡೆಯದೆ ಐಎಎಸ್ ಅಧಿಕಾರಿ ಶಕುಂತಲಾ ಗಾಮ್ಲಿನ್ ಅವರನ್ನು ಪ್ರಭಾರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನಜೀಬ್ ಜಂಗ್ ನೇಮಕ ಮಾಡಿದ್ದು ವಿವಾದವಾಗಿತ್ತು. ಕೇಜ್ರಿವಾಲ್ ಇದನ್ನು ಕಟುವಾಗಿ ವಿರೋಧಿಸಿ, ನೇಮಕವನ್ನು ಪ್ರಶ್ನಿಸಿದ್ದರು.

ನಜೀಬ್ ಜಂಗ್ ಕಳಿಸಿದ್ದ ನೇಮಕಾತಿ ಆದೇಶಕ್ಕೆ ಮಜುಂದಾರ್ ಸಹಿ ಹಾಕಿದ್ದು ಕೇಜ್ರಿವಾಲ್ ಕೆಂಗಣ್ಣಿಗೆ ಕಾರಣವಾಗಿತ್ತು. ಶನಿವಾರದಂದು ಮಜುಂದಾರ್‍ರನ್ನು ಕೇಜ್ರಿವಾಲ್ ಏಕಾಏಕಿ ಹುದ್ದೆಯಿಂದ ತೆಗೆದುಹಾಕಿ ಆದೇಶ ಹೊರಡಿಸಿದ್ದಲ್ಲದೆ ಅವರ ಸ್ಥಾನಕ್ಕೆ ರಾಜೇಂದ್ರ ಕುಮಾರ್‍ರನ್ನು ನೇಮಿಸಿದ್ದರು. ಆದರೆ ಸೋಮವಾರ ಜಂಗ್ ಕೇಜ್ರಿವಾಲ್ ಸರ್ಕಾರದ ಆದೇಶ ತಿರಸ್ಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT