ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಮೋದಿ ಸರ್ಕಾರಕ್ಕೆ ಶೂನ್ಯ ಅಂಕ ನೀಡಿದ ರಾಹುಲ್ ಗಾಂಧಿ

ರೈತರು, ಕಾರ್ಮಿಕರನ್ನು ಕಡೆಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂದು ವರ್ಷದ ಸಾಧನೆಗೆ ಕಾಂಗ್ರೆಸ್ ಉಪಾಧ್ಯಕ್ಷ ನೀಡಿದ ಅಂಕ ಹತ್ತರಲ್ಲಿ `ಸೊನ್ನೆ'!...

ಅಮೇಥಿ/ನವದೆಹಲಿ: ರೈತರು, ಕಾರ್ಮಿಕರನ್ನು ಕಡೆಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂದು ವರ್ಷದ ಸಾಧನೆಗೆ ಕಾಂಗ್ರೆಸ್ ಉಪಾಧ್ಯಕ್ಷ ನೀಡಿದ ಅಂಕ ಹತ್ತರಲ್ಲಿ `ಸೊನ್ನೆ'!

`ರೈತರು ಮತ್ತು ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ನಾನು ಮೋದಿ ಸರ್ಕಾರಕ್ಕೆ ಹತ್ತರಲ್ಲಿ ಸೊನ್ನೆ ಅಂಕ ನೀಡುತ್ತೇನೆ. ಆದರೆ, ಕೆಲವು ಉದ್ಯಮಪತಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನೋಡಿದರೆ ಹತ್ತರಲ್ಲಿ ಹತ್ತು ಅಂಕ ನೀಡುತ್ತೇನೆ' ಎಂದು ರಾಹುಲ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಅಮೇಠಿಗೆ ತೆರಳುವ ಮಾರ್ಗ ಮಧ್ಯೆ ಎದುರಾದ ಪತ್ರಕರ್ತರು ಮೋದಿ ಸರ್ಕಾರದ ವರ್ಷದ ಸಾಧನೆಗೆ ಎಷ್ಟು ಅಂಕ ನೀಡುತ್ತೀರಿ? ಎಂದು ಕೇಳಿದಾಗ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ದ್ವೇಷದ ರಾಜಕಾರಣ:
ಅಮೇಠಿಯಲ್ಲಿ ಆರಂಭಿಸಲುದ್ದೇಶಿಸಿರುವ ಮೆಗಾ ಫುಡ್ ಪಾರ್ಕ್ ಅನ್ನು ರದ್ದು ಮಾಡಿದ ಸರ್ಕಾರದ ನಿರ್ಧಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಹುಲ್, ಮೋದಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ತಮ್ಮ ಸ್ವಕ್ಷೇತ್ರ ಅಮೇಠಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರದ ತಿರುಗೇಟು:
ರಾಹುಲ್ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ಫುಡ್ ಪಾರ್ಕ್ ಆರಂಭ ಮಾಡದಿರಲು ಹಿಂದಿನ ಯುಪಿಎ ಸರ್ಕಾರ ಕಾರಣ. ಆ ಸರ್ಕಾರದ ಅವಧಿಯಲ್ಲೇ ಅನುಮತಿ ನಿರಾಕರಿಸಲಾಗಿತ್ತು ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್‍ಸಿಮ್ರತ್ ಕೌರ್ ಬಾದಲ್ ಸೋಮವಾರ ತಿಳಿಸಿದ್ದಾರೆ. ಅದಕ್ಕೆ ಪೂರಕವಾಗಿ ಅನುಮತಿ ನಿರಾಕರಿಸಿದ ಪತ್ರವನ್ನೂ ಅವರು ಬಿಡುಗಡೆ ಮಾಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT