ಸುನಂದಾ ಪುಷ್ಕರ್ 
ದೇಶ

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಸಾಕ್ಷಿಗಳ ಸುಳ್ಳು ಪತ್ತೆ ಪರೀಕ್ಷೆಗೆ ಕೋರ್ಟ್ ಅನುಮತಿ

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ ಸಂಬಂಧ ಮೂರು ಪ್ರಮುಖ ಸಾಕ್ಷಿಗಳ ಸುಳ್ಳು ಪತ್ತೆ ......

ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ ಸಂಬಂಧ ಮೂರು ಪ್ರಮುಖ ಸಾಕ್ಷಿಗಳ ಸುಳ್ಳು ಪತ್ತೆ ಪರೀಕ್ಷೆಗೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.
ಶಶಿ ತರೂರ್ ನಿಕಟ ವರ್ತಿಗಳು ಎನ್ನಲಾದ ಮೂವರ ಸುಳ್ಳು ಪತ್ತೆ ಪರೀಕ್ಷೆಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ ಮನವಿ ಮಾಡಿತ್ತು. ಹೀಗಾಗಿ ದೆಹಲಿ ಕೋರ್ಟ್ ಪರೀಕ್ಷೆಗೆ ಅನುಮತಿ ನೀಡಿದೆ.
ತರೂರ್ ಮನೆ ಕೆಲಸದಾತ ನಾರಾಯಣ ಸಿಂಗ್, ಡ್ರೈವರ್, ಭಜರಂಗಿ,  ಮತ್ತು ತರೂರ್ ಸ್ನೇಹಿತ ಸಂಜಯ್ ದೀವಾನ್ ರಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ನ್ಯಾಯಾಲಯ ಸಮ್ಮತಿಸಿದೆ ಎಂದು ಸುನಂದಾ ಪುಷ್ಕರ್ ಪರ ವಕೀಲ ವಿಕಾಸ್ ಪಾಸ್ವ ಹೇಳಿದ್ದಾರೆ.
ಸುಳ್ಳು ಪತ್ತೆ ಪರೀಕ್ಷೆ ಇನ್ನೂ ದಿನಾಂಕ ನಿಗದಿ ಮಾಡಿಲ್ಲ. ಮೂವರಿಗೂ ಒಂದೇ ಬಾರಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು ಶೀಘ್ರವೇ ಪರೀಕ್ಷೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸಂಸದ ಶಶಿ ತರೂರ್, ಅವರ ಸಿಬ್ಬಂದಿ, ಸ್ನೇಹಿತರು, ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಹಾಗೂ ಪತ್ರಕರ್ತೆ ನಳಿನಿ ಸಿಂಗ್ ಅವರನ್ನು ಈಗಾಗಲೇ ಪೋಲೀಸರು ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT