ಬ್ಯಾಂಕಿನಲ್ಲಿ ಡಿಪಾಸಿಟ್ ಮಾಡಿದ ಚಿನ್ನದ ಮೇಲಿನ ಬಡ್ಡಿದರಕ್ಕೆ ತೆರಿಗೆ ವಿನಾಯ್ತಿ ! 
ದೇಶ

ಬ್ಯಾಂಕಿನಲ್ಲಿ ಡಿಪಾಸಿಟ್ ಮಾಡಿದ ಚಿನ್ನದ ಮೇಲಿನ ಬಡ್ಡಿದರಕ್ಕೆ ತೆರಿಗೆ ವಿನಾಯ್ತಿ !

ಬ್ಯಾಂಕಿನಲ್ಲಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಇಡುವ ಚಿನ್ನದ ಮೇಲೆ ನೀಡಲಾಗುವ ಬಡ್ಡಿಗೆ ತೆರಿಗೆ ವಿನಾಯ್ತಿ ನೀಡುವ ಸಂಬಂಧ ಸರ್ಕಾರ ಮಾದರಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ...

ನವದೆಹಲಿ: ಬ್ಯಾಂಕಿನಲ್ಲಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಇಡುವ ಚಿನ್ನದ ಮೇಲೆ ನೀಡಲಾಗುವ ಬಡ್ಡಿಗೆ ತೆರಿಗೆ ವಿನಾಯ್ತಿ ನೀಡುವ ಸಂಬಂಧ ಸರ್ಕಾರ ಮಾದರಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಈ ಮಾರ್ಗಸೂಚಿ ಪ್ರಕಾರ, ಕನಿಷ್ಠ 30 ಗ್ರಾಂ ಚಿನ್ನವನ್ನು ಬ್ಯಾಂಕಿನಲ್ಲಿ ಇಡಬೇಕು. ಇದಕ್ಕೆ ಸಿಗುವ ಬಡ್ಡಿಯ ಮೇಲೆ ಸಂಪೂರ್ಣ ತೆರಿಗೆ ವಿನಾಯ್ತಿ ನೀಡಲಾಗುವುದು. ವ್ಯಕ್ತಿಗಳು ಅಥವಾ ಸಂಸ್ಥೆಗಳ ಬಳಿ ಇರುವ ಚಿನ್ನವನ್ನು ಬಿಐಎಸ್ ಪ್ರಮಾಣೀಕೃತ ಹಾಲ್ ಮಾರ್ಕಿಂಗ್ ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ. ಬಡ್ಡಿಪಡೆಯ ಬೇಕಾದರೆ ಬ್ಯಾಂಕ್‍ಗಳಲ್ಲಿ ಗೋಲ್ಡ್ ಉಳಿತಾಯ ಖಾತೆಗಳನ್ನು ಕನಿಷ್ಠ ಒಂದು ವರ್ಷದ ವರೆಗಾದರೂ ನಿರ್ವಹಿಸಬೇಕಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಚಿನ್ನವನ್ನು ಹಣದ ರೂಪಕ್ಕೆ ಪರಿವರ್ತಿಸುವ ಈ ಮಾರ್ಗಸೂಚಿಗೆ ಹಣಕಾಸು ಸಚಿವಾಲಯ ಸಂಬಂಧಪಟ್ಟವರಿಂದ ಜೂ.2ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಳಿದೆ. ಬಜೆಟ್‍ನಲ್ಲೇ ಘೋಷಿಸಲಾಗಿರುವ ಈ ಯೋಜನೆಯನ್ನು ಆರಂಭದಲ್ಲಿ ಆಯ್ದ ನಗರಗಳಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ. ಯೋಜನೆಯಲ್ಲಿ ಡಿಪಾಸಿಟ್ ಮಾಡಿದ ಚಿನ್ನದ ಮೇಲೆ ಜ್ಯುವೆಲ್ಲರ್ ಗಳು ಸಾಲವನ್ನೂ ಪಡೆಯಬಹುದು. ವಿಶ್ವದಲ್ಲೇ ಅತಿ ಹೆಚ್ಚು ಚಿನ್ನದ ಬಳಕೆ ಮಾಡುವ ರಾಷ್ಟ್ರ ಭಾರತವಾಗಿದೆ. ಪ್ರತಿ ವರ್ಷ ಭಾರತ 800ರಿಂದ 1 ಸಾವಿರ ಟನ್‍ನಷ್ಟು ಚಿನ್ನವನ್ನು ಆಮದು ಮಾಡಿಕೊಳ್ಳುತ್ತದೆ. ಹಣದ ರೂಪಕ್ಕೆ ಪರಿವರ್ತನೆಯಾಗದ ಅಂದರೆ ಮನೆ, ದೇವಸ್ಥಾನಗಳಲ್ಲಿರುವ ಚಿನ್ನದ ಪ್ರಮಾಣವೇ ಒಟ್ಟಾರೆ 20 ಸಾವಿರ ಟನ್. ಈ ಯೋಜನೆ ಮೂಲಕ ಸರ್ಕಾರ ಮನೆಯಲ್ಲಿ ಹಾಗೂ ಸಂಸ್ಥೆಗಳ ಬಳಿ ಇರುವ ಚಿನ್ನ ಲೆಕ್ಕಕ್ಕೆ ಸಿಗುವಂತೆ ಮಾಡುವುದು. ಹಾಗೂ ಚಿನ್ನದ ಆಮದನ್ನು ಕಡಿಮೆ ಮಾಡುವುದೇ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT