ನವೀನ್ ಜಿಂದಾಲ್, ಮಧು ಕೋಡಾ, ದಾಸರಿ ನಾರಾಯಣ್ ರಾವ್ 
ದೇಶ

ಕಲ್ಲಿದ್ದಲು ಹಗರಣ: ನವೀನ್ ಜಿಂದಾಲ್, ಮಧು ಕೋಡಾ ಸೇರಿ 10 ಆರೋಪಿಗಳಿಗೆ ಜಾಮೀನು

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಉದ್ಯಮಿ ನವೀನ್ ಜಿಂದಾಲ್, ಕಲ್ಲಿದ್ದಲು ಖಾತೆ ಮಾಜಿ ರಾಜ್ಯ ಸಚಿವ ದಾಸರಿ ನಾರಾಯಣ್ ರಾವ್,...

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಉದ್ಯಮಿ ನವೀನ್ ಜಿಂದಾಲ್, ಕಲ್ಲಿದ್ದಲು ಖಾತೆ ಮಾಜಿ ರಾಜ್ಯ ಸಚಿವ ದಾಸರಿ ನಾರಾಯಣ್ ರಾವ್, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಮತ್ತು ಇತರ ಏಳು ಮಂದಿಗೆ ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಜಾರ್ಖಂಡ್‌ನ ಅಮರಕೊಂಡ ಮುರ್ಗದಂಗಲ್ ಕಲ್ಲಿದ್ದಲ್ಲು ನಿಕ್ಷೇಪ ಹಂಚಿಕೆ ಪ್ರಕರಣ ಸಂಬಂಧ, ಮೇ 22 ರಂದು ಕೋರ್ಟ್ ಗೆ ಹಾಜರಾಗುವಂತೆ ಆರೋಪಿಗಳಿಗೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು  ಸಿಬಿಐ ವಿಶೇಷ ನ್ಯಾಯಾಧೀಶ ಭರತ್‌ ಪರಶಾರ್ ಅವರ ಮುಂದೆ ಹಾಜರಾದ ಜಿಂದಾಲ್, ರಾವ್ ಹಾಗೂ ಕೋಡಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿದೆ.

ಜಿಂದಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಮೇಶ್ ಗುಪ್ತಾ ಅವರು, ತಮ್ಮ ಕಕ್ಷಿದಾರ ಸಿಬಿಐ ಕರೆದಾಗಲೆಲ್ಲ ವಿಚಾರಣೆಗೆ ಹಾಜರಾಗಿದ್ದಾರೆ ಮತ್ತು ಅವರು ತಲೆಮರೆಸಿಕೊಳ್ಳುವ ಅಥವಾ ಪಲಾಯನ ಮಾಡಲು ಸಾಧ್ಯವೆ ಇಲ್ಲ ಎಂದರು.

ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕ ವಿ.ಕೆ.ಶರ್ಮಾ ಅವರು, ಆರೋಪಿಗಳ ಪ್ರಭಾವಿ ರಾಜಕಾರಣಿಗಳು ಹಾಗೂ ಉದ್ಯಮಿಗಳು ಆಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡಬೇಡಿ ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜಿಂದಾಲ್, ಕೋಡಾ ಸೇರಿ ಹತ್ತು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದರು.

ಪ್ರಕರಣ ಸಂಬಂಧ ಏಪ್ರಿಲ್ 29ರಂದು ಸಿಬಿಐ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಆಧರಿಸಿ, ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿತ್ತು. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 120ಬಿ, 420 ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಕಲಂಗಳಡಿ ಸಿಬಿಐ ದೋಷಾರೋಪ ಸಲ್ಲಿಸಿದೆ.

ಜಿಂದಾಲ್, ಕೋಡಾ ಅವರಲ್ಲದೇ ಯುಪಿಎ ಅವಧಿಯಲ್ಲಿ ಕಲ್ಲಿದ್ದಲು ಇಲಾಖೆಯ ರಾಜ್ಯ ಖಾತೆ ಸಚಿವರಾಗಿದ್ದ ದಾಸರಿ ನಾರಾಯಣರಾವ್, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ, ಜ್ಞಾನ ಸ್ವರೂಪ್ ಗರ್ಗ್, ಸುರೇಶ್ ಸಿಂಘಾಲ್, ರಾಜೀವ್ ಜೈನ್, ಗಿರೀಶ್ ಕುಮಾರ್ ಸುನೆಜಾ, ಆರ್.ಕೆ.ಸರಫ್ ಹಾಗೂ ರಾಮಕೃಷ್ಣ ಪ್ರಸಾದ್ ಜಾಮೀನು ಪಡೆದಿರುವ ಇತರೆ ಆರೋಪಿಗಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT