ಆ್ಯಸಿಡ್ ದಾಳಿಗೆ ಒಳಗಾದ ಯುವತಿ ರೇಣುಸಹು 
ದೇಶ

ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಯುವತಿಯೊಬ್ಬಳ ಮೇಲೆ ಆ್ಯಸಿಡ್ ಮಾಡಿದ ಯುವಕನೊಬ್ಬ ನಂತರ ತನ್ನ ಹೊಟ್ಟೆಗೆ ಚಾಕು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಭೂಪಾಲ್: ಯುವತಿಯೊಬ್ಬಳ ಮೇಲೆ ಆ್ಯಸಿಡ್ ಮಾಡಿದ ಯುವಕನೊಬ್ಬ ನಂತರ ತನ್ನ ಹೊಟ್ಟೆಗೆ ಚಾಕು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ರೇಣುಸಹು (21) ಎಂಬ ಯುವತಿ ಜಿಮ್ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ನೆರೆ ಮನೆಯ ಸಂಜಯ್ ಎಂಬಾತ ಹಿಂಬಾಲಿಸಿದ್ದಾನೆ. ಈ ವೇಳೆ ಕೋಪ ಗೊಂಡ ರೇಣುಸಹು ಹತ್ತಿರದಲ್ಲಿದ್ದ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಹೋಗಿದ್ದಾರೆ. ಈ ವೇಳೆ ಬೇರೆ ಪೋಲೀಸ್ ಠಾಣೆಗೆ ಹೋಗುವಂತೆ ಪೊಲೀಸರು ಯುವತಿಗೆ ಸೂಚಿಸಿದ್ದಾರೆ.

ನಂತರ ಯುವತಿಯನ್ನು ಮತ್ತೆ ಹಿಂಬಾಲಿಸಿದ ಸಂಜಯ್ ಇದ್ದಕ್ಕಿದ್ದಂತೆ ಯುವತಿಯನ್ನು ತಡೆದು ಕೈಯಲ್ಲಿದ್ದ ಆ್ಯಸಿಡ್ ನ್ನು ಮುಖಕ್ಕೆ ಹಾಕಿದ್ದಾನೆ. ಇದನ್ನು ಕಂಡ ಸ್ಥಳೀಯರು ಸಂಜಯನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಸಂಜಯ್ ತನ್ನ ಜೇಬಲ್ಲಿದ್ದ ಚಾಕು ತೆಗೆದುಕೊಂಡು ತನ್ನ ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸಂಜಯ್ ಪಾಟೀಲ್ ನೆರೆಮನೆಯ ಹುಡುಗನಾಗಿದ್ದು, ಹಲವು ವರ್ಷಗಳಿಂದ ನಮಗೆ ಗೊತ್ತಿರುವ ಹುಡುಗ. ಕೆಲವು ವರ್ಷಗಳಿಂದ ನಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ನಾವು ಪೊಲೀಸರಿಗೆ ದೂರು ಸಹ ನೀಡುತ್ತಿದ್ದೆವು. ಪೊಲೀಸರು ಸಂಜಯ್ ನನ್ನು ಠಾಣೆಗೆ ಕರೆದುಕೊಂಡು ಹೋಗಿ, ಬುದ್ದಿವಾದ ಹೇಳಿ ಮತ್ತೆ ಬಿಡುಗಡೆ ಮಾಡಿದ್ದರು. ಇದೀಗ ಮತ್ತೆ ನಮ್ಮ ಮಗಳ ಮೇಲೆ ದಾಳಿ ಮಾಡಿದ್ದಾನೆ ಎಂದು ಯುವತಿಯ ಪೋಷಕರು ಹೇಳಿಕೊಂಡಿದ್ದಾರೆ.

ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT