ನಜ್ಮಾ ಹೆಫ್ತುಲ್ಲಾ 
ದೇಶ

ಸ್ವಾತಂತ್ರ್ಯದಿಂದಲೂ ಮುಸ್ಲಿಂರು ಪರಕೀಯ ಭಾವನೆಯಲ್ಲೆ ಬದುಕುತ್ತಿದ್ದಾರೆ: ನಜ್ಮಾ ಹೆಫ್ತುಲ್ಲಾ

ಮುಸ್ಲಿಂರು ಪರಕೀಯರು ಎಂಬ ಭಾವನೆ ಈಗಿನಿಂದಲ್ಲ ಸ್ವಾತಂತ್ರ್ಯ ಸಿಕ್ಕ ನಂತರದಿಂದಲೂ ಇದೆ. ಇದೇ ಭಾವನೆಯಲ್ಲೇ ಬದುಕುತ್ತಿದ್ದೇವೆ ಎಂದು ಕೆಂದ್ರ...

ನವದೆಹಲಿ: ಮುಸ್ಲಿಂರು ಪರಕೀಯರು ಎಂಬ ಭಾವನೆ ಈಗಿನಿಂದಲ್ಲ ಸ್ವಾತಂತ್ರ್ಯ ಸಿಕ್ಕ ನಂತರದಿಂದಲೂ ಇದೆ. ಇದೇ ಭಾವನೆಯಲ್ಲೇ ಬದುಕುತ್ತಿದ್ದೇವೆ ಎಂದು ಕೆಂದ್ರ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವೆ ನಜ್ಮಾ ಹೆಪ್ತುಲ್ಲಾ ಭಾನುವಾರ ಹೇಳಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಂದರ್ಭದಲ್ಲಿ ಈ ಅವರು ರೀತಿ ಅಭಿಪ್ರಾಯಪಟ್ಟಿದ್ದು, ಬಿಜೆಪಿ ಸರ್ಕಾರವಿದ್ದಾಗ ಅಲ್ಪಸಂಖ್ಯಾತರಿಗೆ ಭದ್ರತೆ ಇರುವುದಿಲ್ಲ ಎಂಬುದನ್ನು ಅವರು ಅಲ್ಲಗಳೆದರು. ಈಗ ಮಾತ್ರವಲ್ಲ ಸ್ವಾತಂತ್ರ್ಯನಂತರದಿಂದಲೂ ಮುಸ್ಲಿಮರು ಪರಕೀಯರೆಂಬ ಭಾವನೆಯಲ್ಲೇ ಇದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರ್ಕಾರ ಮಾಡಿದ ಯೋಜನೆಗಳು ಮತ್ತು ಮಸೂದೆಗಳೇ ಕಾರಣ ಎಂದು ಆರೋಪಿಸಿದ್ದಾರೆ.

ಮುಸ್ಲಿಂರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಅಂಶವೇ ಅವರನ್ನು ಪರಕೀಯ ಭಾವನೆಗೆ ತಳ್ಳಿದೆ ಎಂದು ನಜ್ಮಾ ಹೆಫ್ತುಲ್ಲಾ ಅಭಿಪ್ರಾಯಪಟ್ಟರು.

ಜಾತ್ಯಾತೀತತೆಯ ಮಂತ್ರ ಪಠಿಸುವ ಕಾಂಗ್ರೆಸ್ ಮುಸ್ಲಿಮರಿಗೆ ಕೇವಲ ‘ಬಾಯಿ ಮಾತಿನಲ್ಲಿ’ ಬೆಂಬಲ ನೀಡುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸುವ ಮೂಲಕ ಅವರಲ್ಲಿನ ಪರಕೀಯ ಭಾವನೆಯನ್ನು ದೂರ ಮಾಡಲು ಯತ್ನಿಸುತ್ತಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT