ಒಮರ್ ಅಬ್ದುಲ್ಲಾ 
ದೇಶ

ರಾಜಕೀಯ ದುರುದ್ದೇಶಕ್ಕಾಗಿ ಅಪ್ಜಲ್ ಗುರುವನ್ನು ಗಲ್ಲಿಗೇರಿಸಲಾಯಿತು: ಒಮರ್ ಅಬ್ದುಲ್ಲಾ

ಸಂಸತ್ ಮೇಲೆ ದಾಳಿ ನಡೆಸಿದ ಉಗ್ರ ಅಫ್ಜಲ್ ಗುರುವನ್ನು ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಗಲ್ಲಿಗೇರಿಸಿತು ......

ನವದೆಹಲಿ: ಸಂಸತ್ ಮೇಲೆ ದಾಳಿ ನಡೆಸಿದ ಉಗ್ರ ಅಫ್ಜಲ್ ಗುರುವನ್ನು ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಗಲ್ಲಿಗೇರಿಸಿತು ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ದೂರಿದ್ದಾರೆ.

ಗಲ್ಲಿಗೇರಿಸುವ ಕೆಲ ಘಂಟೆಗಳ ಮುಂದೆಯಷ್ಟೇ ಸರ್ಕಾರ, ಅಪ್ಜಲ್ ಗುರುವಿಗೆ ವಿಷಯ ತಿಳಿಸಲಾಗಿತ್ತು.  ಅಂದಿನ ದಿನ ನಾನು ನನ್ನ ಸಹೋದರಿ ಜೊತೆಗೆ ದೆಹಲಿಯ ರೆಸ್ಟೋರೆಂಟ್ ಗೆ ಊಟಕ್ಕೆ ತೆರಳಿದ್ದೆ.ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಕರೆ ಮಾಡಿ ನಾಳೆ ಬೆಳಗ್ಗೆ ಉಗ್ರ ಅಫ್ಜಲ್ ಗುರುವನ್ನು ಗಲ್ಲಿಗೇರಿಸುತ್ತಿರುವುದಾಗಿ, ಸಂಬಂಧ ಪಟ್ಟ ಕಾಗದ ಪತ್ರಗಳಿಗೆ ಸಹಿ ಹಾಕುತ್ತಿರುವುದಾಗಿ ತಿಳಿಸಿದರು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಫೆಬ್ರವರಿ 9 2013 ರಂದು ಅಫ್ಜಲ್ ಗುರುವನ್ನು ಗಲ್ಲಿಗೇರಿಸಲಾಗಿತ್ತು. ಅಫ್ಜಲ್ ಗುರುವಿನ ವಿಷ್ಯದಲ್ಲಿ ಕೊನೆಯ ಕ್ಷಣದವರೆಗೂ ಏನು ಮಾಡಲಾಗದು ಎಂದು ಗೃಹ ಸಚಿವರಿಗೂ ಗೊತ್ತಿತ್ತು. ಸತ್ಯ ಇಷ್ಟ ಆಗಲಿ, ಆಗದೇ ಇರಲಿ ಅಫ್ಜಲ್ ನನ್ನು ರಾಜಕೀಯ ಕಾರಣಕ್ಕಾಗಿ ಗಲ್ಲಿಗೇರಿಸಲಾಗುತ್ತಿದೆ ಎಂದು ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾಗಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಎದುರಿಸಲು ಮತ್ತು  ಬಿಜೆಪಿಯ ಆರೋಪವನ್ನು ಸುಳ್ಳುಮಾಡಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜಕೀಯ ಕಾರಣಗಳಿಗಾಗಿ ಅಫ್ಜಲ್ ಗುರು ಮತ್ತು ಅಜ್ಮಲ್ ಕಸಬ್ ನನ್ನು ಗಲ್ಲಿಗೇರಿಸಲಾಯಿತು ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT