ಕಾಳಿ ಗಂಡಕೀ ಅಣೆಕಟ್ಟು 
ದೇಶ

ನೇಪಾಳ ಭೂಕುಸಿತ: ಭಾರತಕ್ಕೆ ಪ್ರವಾಹ ಭೀತಿ

ಏ.25ರ ಭೂಕಂಪದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ನೇಪಾಳದಲ್ಲಿ ಶನಿವಾರ ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ...

ಕಠ್ಮಂಡು: ಏ.25ರ ಭೂಕಂಪದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ನೇಪಾಳದಲ್ಲಿ ಶನಿವಾರ ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ.

ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಈ ಭೂಕುಸಿತದಿಂದ ಕಾಳಿ ಗಂಡಕೀ ನದಿಯ ಹರಿವಿಗೆ ಅಡ್ಡಿಯಾಗಿದ್ದು, ಇದು ನೇಪಾಳದಲ್ಲಿ ಮಾತ್ರವಲ್ಲದೆ, ಭಾರತದಲ್ಲೂ ಪ್ರವಾಹ ಭೀತಿ ಉಂಟುಮಾಡಿದೆ.

ಭೂಕುಸಿತದ ಪರಿಣಾಮ ಕಲ್ಲು, ಮಣ್ಣುಗಳು ಕುಸಿದು ಬಿದ್ದಿದ್ದು, ಕಾಳಿ ಗಂಡಕೀ ನದಿಯ ಹರಿವಿಗೆ ಅಡ್ಡಿಯಾಗಿದೆ. ಹೀಗಾಗಿ ನದಿಯು ಇನ್ನಷ್ಟು ಆಳಕ್ಕೆ ತಲುಪಿ, 150 ಮೀ. ಎತ್ತರಕ್ಕೆ ನೀರು ನಿಂತಿದೆ.

ನೀರಿನ ಒತ್ತಡ ಹೆಚ್ಚಾಗಿ ಕೃತಕ ಅಣೆಕಟ್ಟು ಒಡೆದು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಈ ನದಿಯು ಉತ್ತರ ಪ್ರದೇಶ ಬಿಹಾರ ರಾಜ್ಯಗಳ ಗಡಿಯಲ್ಲೂ ಸಾಗುತ್ತದೆ. ಒಂದು ವೇಳೆ ಅಣೆಕಟ್ಟು ಒಡೆದರೆ ಭಾರತದಲ್ಲೂ ದಿಢೀರ್ ಪ್ರವಾಹ ಉಂಟಾಗುವ ಭೀತಿಯಿದೆ ಎಂದು ನೇಪಾಳದ ವಿಜ್ಞಾನ, ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT