ಪ್ರಣಬ್ ಮುಖರ್ಜಿ 
ದೇಶ

ಬೊಪೋರ್ಸ್ ಹಗರಣ ಎಂದೂ ಭಾರತೀಯ ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬೊಪೋರ್ಸ್ ಪ್ರಕರಣ ಹಗರಣ ಎಂದು ಭಾರತದ ಯಾವುದೇ ನ್ಯಾಯಾಲಯಗಳಲ್ಲೂ ಸಾಬೀತಾಗಿಲ್ಲ.....

ನವದೆಹಲಿ: ಬೊಪೋರ್ಸ್ ಪ್ರಕರಣ ಹಗರಣ ಎಂದು ಭಾರತದ ಯಾವುದೇ ನ್ಯಾಯಾಲಯಗಳಲ್ಲೂ ಸಾಬೀತಾಗಿಲ್ಲ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯ ಪಟ್ಟಿದ್ದಾರೆ.

ಸ್ವೀಡೀಸ್ ಅಧ್ಯಕ್ಷರ ಭೇಟಿಗೆ ತೆರಳುವ ಮುನ್ನ ಸ್ವೀಡನ್ ನಲ್ಲಿ  ಮಾತನಾಡಿದ ಅವರು, ಬೋಪೋರ್ಸ್ ಮಾಧ್ಯಮಗಳಿಂದ ಸೃಷ್ಟಿಯಾದ ಹಗರಣ ಎಂದು ಹೇಳಿದರು. ಭಾರತದ ಯಾವುದೇ ಕೋರ್ಟ್ ನಲ್ಲಿ ಇದುವರೆಗೆ ಇದೊಂದು ಹಗರಣ ಎಂದು ಸ್ಥಾಪಿತವಾಗಿಲ್ಲ ಎಂದರು.
ನಾನು ದೇಶದ ರಕ್ಷಣಾ ಸಚಿವರಾಗಿದ್ದಾಗ ಯುದ್ದಕ್ಕೆ ಸಂಬಂಧ ಪಟ್ಟ ಬಂದೂಕುಗಳಲ್ಲಿ  ಇಂದಿಗೂ ಭಾರತೀಯ ಸೇನೆ ಬಳಸುತ್ತಿರುವ ಬಂದೂಕುಗಳಲ್ಲಿ ಇದೊಂದು ಅತ್ಯಂತ ಉತ್ತಮ ಗುಣಮಟ್ಟದ್ದು ಎಂದು ಅಧಿಕಾರಿಗಳು ಪ್ರಮಾಣೀಕರಿಸಿದ್ದರು ಎಂದು ಪ್ರಣಬ್ ಮುಖರ್ಜಿ ತಿಳಿಸಿದರು.

ಇನ್ನು ಭಾರತದ ಯಾವುದೇ ನ್ಯಾಯಾಲಯ ಇದೊಂದು ಹಗರಣ ಎಂದು ಪರಿಗಣಿಸಿ ತೀರ್ಪು ನೀಡಿಲ್ಲ, ಬೊಪೋರ್ಸ್ ಹಗರಣ ಎಂಬುದು ಮಾಧ್ಯಮಗಳ ಸೃಷ್ಟಿ ಪುನರುಚ್ಚರಿಸಿದರು.

ಭಾರತ ಸರ್ಕಾರ 285 ಮಿಲಿಯನ್ ಡಾಲರ್ ವೆಚ್ಚದಲ್ಲಿ 1986ರಲ್ಲಿ 155 ಎಂಎಂ ಹೌವಿಟ್ಜರ್ ಬಂದೂಕುಗಳನ್ನು ಸ್ವೀಡೀಶ್ ನ ಬೊಪೋರ್ಸ್ ಶಸ್ತ್ರ ಕಂಪನಿಯಿಂದ ಖರೀದಿಸಿತ್ತು.

ಬೊಪೋರ್ಸ್ ಕಂಪನಿಯಿಂದ ಖರೀದಿಗೆ ಅನುಮತಿ ನೀಡಲು ರಾಜಕಾರಣಿಗಳು ಹಾಗೂ ಕೆಲವು ರಕ್ಷಣಾ ಅಧಿಕಾರಿಗಳು ಕಿಕ್ ಬ್ಯಾಕ್ ಪಡೆದುಕೊಂಡಿದ್ದವು ಎಂದು ಸ್ವೀಡನ್ ಮಾಧ್ಯಮಗಳು ವರದಿ ಮಾಡಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT