ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಎಂಪಿಲಾಡ್ ನಿಧಿ ಬಳಸದ ಶೇ.55 ಸಂಸದರು!

ಅಧಿಕಾರಕ್ಕೇರಿ ಒಂದು ವರ್ಷ ಕಳೆದರೂ ಕರ್ನಾಟಕದ 20 ಮಂದಿ ಸೇರಿದಂತೆ ಶೇ.55ರಷ್ಟು ಸಂಸದರು ತಮ್ಮ ಎಂಪಿ ಲಾಡ್ ನಿಧಿಯಿಂದ ಒಂದೇ ಒಂದು...

ನವದೆಹಲಿ: ಅಧಿಕಾರಕ್ಕೇರಿ ಒಂದು ವರ್ಷ ಕಳೆದರೂ ಕರ್ನಾಟಕದ 20 ಮಂದಿ ಸೇರಿದಂತೆ ಶೇ.55ರಷ್ಟು ಸಂಸದರು ತಮ್ಮ ಎಂಪಿ ಲಾಡ್ ನಿಧಿಯಿಂದ ಒಂದೇ ಒಂದು ರುಪಾಯಿಯನ್ನೂ ವೆಚ್ಚ ಮಾಡಿಲ್ಲ.

ಪ್ರತಿಯೊಬ್ಬ ಸಂಸದರಿಗೂ ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ವರ್ಷಕ್ಕೆ ರು.5 ಕೋಟಿಯನ್ನು ಮೀಸಲಿಡಲಾಗುತ್ತದೆ. ಆದರೆ 542 ಮಂದಿ ಸಂಸದರ ಪೈಕಿ 298 ಮಂದಿ ಸಂಸದರ ಸ್ಥಳೀಯಾಭಿವೃದ್ಧಿ ನಿಧಿ(ಎಂಪಿಲಾಡ್)ಯನ್ನು ಬಳಸಿಯೇ ಇಲ್ಲ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಎಂಪಿಲಾಡ್ ನಿಧಿಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಸಂಸದರ ಪೈಕಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ (ಲಖನೌ), ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್ (ಬೆಂಗಳೂರು ದಕ್ಷಿಣ), ಕಾನೂನು ಸಚಿವ ಡಿ.ವಿ. ಸದಾನಂದ ಗೌಡ(ಬೆಂಗಳೂರು ಉತ್ತರ), ಸಚಿವರಾದ ಕಲ್‍ರಾಜ್ ಮಿಶ್ರಾ, ಉಮಾಭಾರತಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ನಾಯಕ ಮುರಳಿ ಮನೋಹರ ಜೋಷಿ, ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತಿತರ ಪ್ರಮುಖರೂ ಸೇರಿದ್ದಾರೆ. ಇದೇ bsಳೆ, ಪ್ರಧಾನಿ ಮೋದಿ ಅವರ ವಾರಾಣಸಿ ಕ್ಷೇತ್ರದಲ್ಲಿ ಶೇ.16ರಷ್ಟು ಹಣವನ್ನು ಬಳಕೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!