ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಎಂಪಿಲಾಡ್ ನಿಧಿ ಬಳಸದ ಶೇ.55 ಸಂಸದರು!

ಅಧಿಕಾರಕ್ಕೇರಿ ಒಂದು ವರ್ಷ ಕಳೆದರೂ ಕರ್ನಾಟಕದ 20 ಮಂದಿ ಸೇರಿದಂತೆ ಶೇ.55ರಷ್ಟು ಸಂಸದರು ತಮ್ಮ ಎಂಪಿ ಲಾಡ್ ನಿಧಿಯಿಂದ ಒಂದೇ ಒಂದು...

ನವದೆಹಲಿ: ಅಧಿಕಾರಕ್ಕೇರಿ ಒಂದು ವರ್ಷ ಕಳೆದರೂ ಕರ್ನಾಟಕದ 20 ಮಂದಿ ಸೇರಿದಂತೆ ಶೇ.55ರಷ್ಟು ಸಂಸದರು ತಮ್ಮ ಎಂಪಿ ಲಾಡ್ ನಿಧಿಯಿಂದ ಒಂದೇ ಒಂದು ರುಪಾಯಿಯನ್ನೂ ವೆಚ್ಚ ಮಾಡಿಲ್ಲ.

ಪ್ರತಿಯೊಬ್ಬ ಸಂಸದರಿಗೂ ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ವರ್ಷಕ್ಕೆ ರು.5 ಕೋಟಿಯನ್ನು ಮೀಸಲಿಡಲಾಗುತ್ತದೆ. ಆದರೆ 542 ಮಂದಿ ಸಂಸದರ ಪೈಕಿ 298 ಮಂದಿ ಸಂಸದರ ಸ್ಥಳೀಯಾಭಿವೃದ್ಧಿ ನಿಧಿ(ಎಂಪಿಲಾಡ್)ಯನ್ನು ಬಳಸಿಯೇ ಇಲ್ಲ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಎಂಪಿಲಾಡ್ ನಿಧಿಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಸಂಸದರ ಪೈಕಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ (ಲಖನೌ), ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್ (ಬೆಂಗಳೂರು ದಕ್ಷಿಣ), ಕಾನೂನು ಸಚಿವ ಡಿ.ವಿ. ಸದಾನಂದ ಗೌಡ(ಬೆಂಗಳೂರು ಉತ್ತರ), ಸಚಿವರಾದ ಕಲ್‍ರಾಜ್ ಮಿಶ್ರಾ, ಉಮಾಭಾರತಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ನಾಯಕ ಮುರಳಿ ಮನೋಹರ ಜೋಷಿ, ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತಿತರ ಪ್ರಮುಖರೂ ಸೇರಿದ್ದಾರೆ. ಇದೇ bsಳೆ, ಪ್ರಧಾನಿ ಮೋದಿ ಅವರ ವಾರಾಣಸಿ ಕ್ಷೇತ್ರದಲ್ಲಿ ಶೇ.16ರಷ್ಟು ಹಣವನ್ನು ಬಳಕೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT