ಮೋದಿ ವಿರುದ್ಧ ಪ್ರತಿಭಟನೆಗಿಳಿದ ಆಮ್ ಆದ್ಮಿ ಪಕ್ಷ 
ದೇಶ

ಮೋದಿ ವಿರುದ್ಧ ಪ್ರತಿಭಟನೆಗಿಳಿದ ಆಮ್ ಆದ್ಮಿ ಪಕ್ಷ

ಒಂದು ವರ್ಷ ಪೂರೈಸಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ಜನರಲ್ಲಿ ಹತಾಶೆ ಭಾವವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ ಬುಧವಾರ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ...

ನವದೆಹಲಿ: ಒಂದು ವರ್ಷ ಪೂರೈಸಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ಜನರಲ್ಲಿ ಹತಾಶೆ ಭಾವವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ ಬುಧವಾರ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಮೋದಿ ಸರ್ಕಾರವನ್ನು ವಿರೋಧಿಸುತ್ತಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಂತರ್ ಮಂತರ್ ನಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು, ಪ್ರತಿನಾಕಾರರನ್ನು ಉದ್ದೇಶಿಸಿ ಮಾತನಾಡಿರುವ ಆಪ್ ಪಕ್ಷದ ಸಂಚಾಲಕ ದಿಲೀಪ್ ಪಾಂಡೆ ಅವರು, ಮೇಲ್ನೋಟಕ್ಕಷ್ಟೇ ಎಲ್ಲವೂ ಸರಿಯಿದೆ ಎಂಬ ರೀತಿಯಲ್ಲಿ ಬಿಜೆಪಿ ನಾಟಕವಾಡುತ್ತಿದೆ. ಬಿಜೆಪಿ ತನ್ನ ಪಕ್ಷದ ಬೆಂಬಲಿಗರನ್ನೇ ಸಂತೋಷವಾಗಿಟ್ಟುಕೊಳ್ಳುವುದರಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮಥುರಾ ರ್ಯಾಲಿಯಲ್ಲಿ ಭಾಗಿಯಾಗಿದ್ದ ಪ್ರಥಾನಮಂತ್ರಿ ನರೇಂದ್ರ ಮೋದಿ ಅವರು ಕನಿಷ್ಠ ಪಕ್ಷ ತಮ್ಮ ಬೆಂಬಲಿಗರಿಗಾದರೂ (ಅಚ್ಚೆ ದಿನ್) ಒಳ್ಳೆಯ ದಿನಗಳು ಬಂದಿದೆಯೇ ಎಂದು ಕೇಳಿಲ್ಲ. ಅವರಿಗೆ ಗೊತ್ತಿದೆ ಒಳ್ಳೆಯ ದಿನಗಳು ಇನ್ನೂ ಜನ ಸಾಮಾನ್ಯ ಬಂದಿಲ್ಲ ಎಂಬುದು. ಹಾಗಾಗಿಯೇ ಅವರು ಈ ಪ್ರಶ್ನೆಯನ್ನು ಎಲ್ಲಿಯೂ ಕೇಳಿಲ್ಲ ಎಂದಿದ್ದಾರೆ. ಇದೇ ವೇಳೆ ಮೋದಿ ವಿದೇಶ ಪ್ರವಾಸ ಕುರಿತಂತೆ ವ್ಯಂಗ್ಯವಾಡಿರುವ ಅವರು, ದೇಶಕ್ಕೆ ಹೆಸರಿಗೆ ಮಾತ್ರ ಪ್ರಧಾನಮಂತ್ರಿ ಇದ್ದಾರೆ. ಆದರೆ, ಯಾವಾಗಲು ಫ್ಲೈಟ್ ಮೋಡ್ ನಲ್ಲಿರುತ್ತಾರಷ್ಟೇ ಎಂದು ಹೇಳಿದ್ದಾರೆ.

ಮೋದಿ ಸರ್ಕಾರ ಜನರನ್ನು ತಲುಪಲು ವಿಫಲವಾಗಿದ್ದು, ಎಲ್ಲಾ ರೀತಿಯಲ್ಲು ಸೋಲು ಕಂಡಿದೆ. ಅಧಿಕಾರಕ್ಕೆ ಬರುವಾಗ ಕೊಟ್ಟ ಭರವಸೆಗಳಲ್ಲಿ ಕೇವಲ ಒಂದು ಭರವಸೆಯನ್ನಾದರೂ ಸರ್ಕಾರ ಪೂರ್ಣಗೊಳಿಸಿಲ್ಲ. ಇದೀಗ ಜನರು ಪ್ರಧಾನಮಂತ್ರಿ ಹಾಗೂ ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನೆ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆಮ್ ಆದ್ಮಿ ಪಕ್ಷದ ವಕ್ತಾರ ಕಪಿಲ್ ಮಿಶ್ರಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT