ಮೋದಿ ವಿರುದ್ಧ ಪ್ರತಿಭಟನೆಗಿಳಿದ ಆಮ್ ಆದ್ಮಿ ಪಕ್ಷ 
ದೇಶ

ಮೋದಿ ವಿರುದ್ಧ ಪ್ರತಿಭಟನೆಗಿಳಿದ ಆಮ್ ಆದ್ಮಿ ಪಕ್ಷ

ಒಂದು ವರ್ಷ ಪೂರೈಸಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ಜನರಲ್ಲಿ ಹತಾಶೆ ಭಾವವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ ಬುಧವಾರ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ...

ನವದೆಹಲಿ: ಒಂದು ವರ್ಷ ಪೂರೈಸಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ಜನರಲ್ಲಿ ಹತಾಶೆ ಭಾವವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ ಬುಧವಾರ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಮೋದಿ ಸರ್ಕಾರವನ್ನು ವಿರೋಧಿಸುತ್ತಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಂತರ್ ಮಂತರ್ ನಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು, ಪ್ರತಿನಾಕಾರರನ್ನು ಉದ್ದೇಶಿಸಿ ಮಾತನಾಡಿರುವ ಆಪ್ ಪಕ್ಷದ ಸಂಚಾಲಕ ದಿಲೀಪ್ ಪಾಂಡೆ ಅವರು, ಮೇಲ್ನೋಟಕ್ಕಷ್ಟೇ ಎಲ್ಲವೂ ಸರಿಯಿದೆ ಎಂಬ ರೀತಿಯಲ್ಲಿ ಬಿಜೆಪಿ ನಾಟಕವಾಡುತ್ತಿದೆ. ಬಿಜೆಪಿ ತನ್ನ ಪಕ್ಷದ ಬೆಂಬಲಿಗರನ್ನೇ ಸಂತೋಷವಾಗಿಟ್ಟುಕೊಳ್ಳುವುದರಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮಥುರಾ ರ್ಯಾಲಿಯಲ್ಲಿ ಭಾಗಿಯಾಗಿದ್ದ ಪ್ರಥಾನಮಂತ್ರಿ ನರೇಂದ್ರ ಮೋದಿ ಅವರು ಕನಿಷ್ಠ ಪಕ್ಷ ತಮ್ಮ ಬೆಂಬಲಿಗರಿಗಾದರೂ (ಅಚ್ಚೆ ದಿನ್) ಒಳ್ಳೆಯ ದಿನಗಳು ಬಂದಿದೆಯೇ ಎಂದು ಕೇಳಿಲ್ಲ. ಅವರಿಗೆ ಗೊತ್ತಿದೆ ಒಳ್ಳೆಯ ದಿನಗಳು ಇನ್ನೂ ಜನ ಸಾಮಾನ್ಯ ಬಂದಿಲ್ಲ ಎಂಬುದು. ಹಾಗಾಗಿಯೇ ಅವರು ಈ ಪ್ರಶ್ನೆಯನ್ನು ಎಲ್ಲಿಯೂ ಕೇಳಿಲ್ಲ ಎಂದಿದ್ದಾರೆ. ಇದೇ ವೇಳೆ ಮೋದಿ ವಿದೇಶ ಪ್ರವಾಸ ಕುರಿತಂತೆ ವ್ಯಂಗ್ಯವಾಡಿರುವ ಅವರು, ದೇಶಕ್ಕೆ ಹೆಸರಿಗೆ ಮಾತ್ರ ಪ್ರಧಾನಮಂತ್ರಿ ಇದ್ದಾರೆ. ಆದರೆ, ಯಾವಾಗಲು ಫ್ಲೈಟ್ ಮೋಡ್ ನಲ್ಲಿರುತ್ತಾರಷ್ಟೇ ಎಂದು ಹೇಳಿದ್ದಾರೆ.

ಮೋದಿ ಸರ್ಕಾರ ಜನರನ್ನು ತಲುಪಲು ವಿಫಲವಾಗಿದ್ದು, ಎಲ್ಲಾ ರೀತಿಯಲ್ಲು ಸೋಲು ಕಂಡಿದೆ. ಅಧಿಕಾರಕ್ಕೆ ಬರುವಾಗ ಕೊಟ್ಟ ಭರವಸೆಗಳಲ್ಲಿ ಕೇವಲ ಒಂದು ಭರವಸೆಯನ್ನಾದರೂ ಸರ್ಕಾರ ಪೂರ್ಣಗೊಳಿಸಿಲ್ಲ. ಇದೀಗ ಜನರು ಪ್ರಧಾನಮಂತ್ರಿ ಹಾಗೂ ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನೆ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆಮ್ ಆದ್ಮಿ ಪಕ್ಷದ ವಕ್ತಾರ ಕಪಿಲ್ ಮಿಶ್ರಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT