ಪಾಲಿ ಕ್ಷೇತ್ರದ ಬಿಜೆಪಿ ಸಂಸದ ಪಿಪಿ ಚೌದರಿ 
ದೇಶ

ಪಾಲಿ ಕ್ಷೇತ್ರದ ಬಿಜೆಪಿ ಸಂಸದ ಪಿಪಿ ಚೌದರಿಗೆ 2015ರ "ಸಂಸದ ರತ್ನ" ಪ್ರಶಸ್ತಿ

ಇದೇ ಮೊದಲ ಬಾರಿಗೆ ಸಂಸದರಾಗಿ ಆಯ್ಗೆಯಾಗಿರುವ ರಾಜಸ್ತಾನದ ಪಾಲಿ ಕ್ಷೇತ್ರದ ಬಿಜೆಪಿ ಸಂಸದ ಪಿಪಿ ಚೌದರಿ ಅವರಿಗೆ 2015ರ "ಸಂಸದ ರತ್ನ" ಪ್ರಶಸ್ತಿ ಒಲಿದುಬಂದಿದೆ.

ಚೆನ್ನೈ: ಇದೇ ಮೊದಲ ಬಾರಿಗೆ ಸಂಸದರಾಗಿ ಆಯ್ಗೆಯಾಗಿರುವ ರಾಜಸ್ತಾನದ ಪಾಲಿ ಕ್ಷೇತ್ರದ ಬಿಜೆಪಿ ಸಂಸದ ಪಿಪಿ ಚೌದರಿ ಅವರಿಗೆ 2015ರ "ಸಂಸದ ರತ್ನ" ಪ್ರಶಸ್ತಿ ಒಲಿದುಬಂದಿದೆ.

ಬಿಜೆಪಿ ಸದಸ್ಯ ಪಿಪಿ ಚೌಧರಿ ಅವರು ಸಂಸತ್ತಿನ ಮುಂಗಡಪತ್ರದ ಅಧಿವೇಶನದ ಕೊನೆಯವರೆಗೆ ಸದನದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಕ್ಕಾಗಿ 2015ರ "ಸಂಸದ ರತ್ನ" ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ತಿಳಿಸಿದೆ. 16ನೇ ಲೋಕಸಭೆಯಲ್ಲಿ ಮುಂಗಡಪತ್ರ ಕಲಾಪದ ಅಂತ್ಯದವರೆಗೆ ಅತ್ಯುತ್ತಮ ಕಾರ್ಯ ನಿರ್ವಹಣೆ ಮಾಡಿದ್ದಕ್ಕಾಗಿ "ಸಂಸದ ರತ್ನ-2015" ಪ್ರಶಸ್ತಿಗೆ ಪಾತ್ರರಾಗಿರುವ ನಾಲ್ವರು ಸಂಸದರಲ್ಲಿ ಚೌಧರಿ ಕೂಡ ಒಬ್ಬರಾಗಿದ್ದಾರೆ’ ಎಂದು ಪ್ರೈಮ್​ಪಾಯಿಂಟ್ ಪೌಂಡೇಷನ್​ನ ಅಧ್ಯಕ್ಷ ಕೆ. ಶ್ರೀನಿವಾಸನ್ ಬುಧವಾರ ಚೆನ್ನೈನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸರ್ಕಾರೇತರ ಸಂಘಟನೆಯಾಗಿರುವ ಪ್ರೈಮ್​ಪಾಯಿಂಟ್ ಫೌಂಡೇಷನ್ ಸಂಸ್ಥೆಯು ಸಂಸತ್ತಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅತ್ಯುತ್ತಮ ಕಾರ್ಯ ನಿರ್ವಹಣೆ ಮಾಡಿದ ಸದಸ್ಯರಿಗೆ 2009ರಿಂದಲೂ "ಸಂಸದ ರತ್ನ" ಪ್ರಶಸ್ತಿ ನೀಡುತ್ತಿದೆ. ಸದಸ್ಯರು ಎತ್ತುವ ಪ್ರಶ್ನೆಗಳ ಸಂಖ್ಯೆ, ಅವರು ಪಾಲ್ಗೊಳ್ಳುವ ಚರ್ಚೆಗಳ ಸಂಖ್ಯೆ, ಅವರು ಮಂಡಿಸುವ ಖಾಸಗಿ ಮಸೂದೆಗಳ ಸಂಖ್ಯೆ ಹಾಗೂ ಸದನದಲ್ಲಿ ಹಾಜರಾತಿ ಆಧಾರದ ಮೇಲೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಪ್ರಸ್ತುತ ಪಾಲಿ ಕ್ಷೇತ್ರದ ಸಂಸದ ಪಿಪಿ ಚೌಧರಿ ಅವರು 2 ಪ್ರಶಸ್ತಿಗಳಿಗೆ ಭಾಜನರಾಗಿದ್ದು, ಅತ್ಯಂತ ಹೆಚ್ಚು (176) ಚರ್ಚೆಗಳಲ್ಲಿ ಪಾಲ್ಗೊಂಡದ್ದಕ್ಕಾಗಿ ಮತ್ತು ಮೊದಲ ಬಾರಿಯ ಸದಸ್ಯರಲ್ಲಿ ಅತ್ಯಂತ ಹೆಚ್ಚು ಸಕ್ರಿಯರಾಗಿದ್ದುದಕ್ಕಾಗಿ ಹೀಗೆ 2 ಪ್ರಶಸ್ತಿಗಳು ಚೌಧರಿ ಅವರಿಗೆ ಲಭಿಸಿವೆ ಎಂದು ತಿಳಿದುಬಂದಿದೆ.

ಪ್ರೈಮ್ ಫೌಂಡೇಷನ್ ನೀಡುವ ಇನ್ನೆರಡು ಪ್ರಶಸ್ತಿಗಳಿಗೆ ಮಹಾರಾಷ್ಟ್ರದ ಶಿರಂಗ್ ಕ್ಷೇತ್ರದ ಶಿವಸೇನಾ ಸದಸ್ಯ ಚಂದು ಬರ್ನೆ ಮತ್ತು ಜಾರ್ಖಂಡ್​ನ ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ಅವರು ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT