ಮನಮೋಹನ್ ಸಿಂಗ್ 
ದೇಶ

ಬೆದರಿಕೆಯ ನೆರಳಲ್ಲಿ ದೇಶದ ಪ್ರಜಾಪ್ರಭುತ್ವ: ಮಾಜಿ ಪ್ರಧಾನಿ ಸಿಂಗ್ ಆರೋಪ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಬೆದರಿಕೆಯ ನೆರಳಲ್ಲಿ ಕಾರ್ಯ ನಿರ್ವಹಿಸುತ್ತಿವೆ ...

ನವದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಬೆದರಿಕೆಯ ನೆರಳಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಪಿಸಿದ್ದಾರೆ.

ಬಹುಕೋಟಿ 2ಜಿ ಸ್ಪೆಕ್ಟ್ರಂ ಹಗರಣ ಸಂಬಂಧ ತಮ್ಮ ವಿರುದ್ಧ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರದೀಪ್ ಬೈಜ್ಬಲ್ ಮಾಡಿರುವ ಆರೋಪ ಸಂಬಂಧ ಮೌನ ಮುರಿದಿರುವ ಸಿಂಗ್ ಈ ಎಲ್ಲಾ ಆರೋಪ  ಸತ್ಯಕ್ಕೆ ದೂರವಾದದ್ದು. ಈ ಎಲ್ಲಾ ಆರೋಪಗಳಿಂದ ಕ್ಲೀನ್ ಚಿಟ್ ಪಡೆದು ಹೊರಬರುವೆ ಎಂದು ಸಿಂಗ್ ವಿಶ್ವಾಸ ವ್ಯಕ್ತ ಪಡಿಸಿದರು.

ನವದೆಹಲಿಯಲ್ಲಿ ನಡೆದ ಎನ್ ಎಸ್ ಯು ಐ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರದೀಪ್ ಬೈಜ್ಪಲ್ ಮಾಡಿರುವ ಆರೋಪಗಳು ನಿರಾಧಾರ ಎಂದು ಸಮರ್ಥಿಸಿಕೊಂಡಿದ್ದಾರೆ.

ನನ್ನ ಸ್ವಂತ ವ್ಯವಹಾರಗಳಿಗೆ ನಾನು ಯಾವತ್ತೂ ಸರ್ಕಾರಿ ಕಚೇರಿಯನ್ನು ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿಲ್ಲ ಎಂದು ಪ್ರದೀಪ್ ಬೈಜ್ಬಲ್ ಆರೋಪಕ್ಕೆ ಸ್ಪಷ್ಟನೆ ನೀಡಿದರು.

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ದೇಶದ ಜನತೆಯ ಗಮನ ಬೇರೆಡೆ ಸೆಳೆಯಲು ಅನಾವಶ್ಯಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಯುಪಿಎ ಸರ್ಕಾರದ ಯೋಜನೆಗಳನ್ನೇ ಮರುನಾಮಕರಣ ಮಾಡಿ ತಮ್ಮದಂ ಯೋಜನೆ ಎಂದು ಎನ್ ಡಿಎ ಸರ್ಕಾರ ಬಿಂಬಿಸುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT