ಅರುಣ್ ಜೇಟ್ಲಿ 
ದೇಶ

ಬೈಜಾಲ್‌ಗೆ ಯುಪಿಎ ಸರ್ಕಾರದಿಂದ ಕಿರುಕುಳ: ಜೇಟ್ಲಿ

ಯುಪಿಎ ಸರ್ಕಾರದ ಅವಧಿಯಲ್ಲಿ ಟ್ರಾಯ್ ಮಾಜಿ ಅಧ್ಯಕ್ಷ ಪ್ರದೀಪ್ ಬೈಜಾಲ್ ಅವರು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು...

ಅಹಮದಾಬಾದ್: ಯುಪಿಎ ಸರ್ಕಾರದ ಅವಧಿಯಲ್ಲಿ ಟ್ರಾಯ್ ಮಾಜಿ ಅಧ್ಯಕ್ಷ ಪ್ರದೀಪ್ ಬೈಜಾಲ್ ಅವರು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಹೇಳಿದ್ದಾರೆ.

2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ವಿರುದ ಪ್ರದೀಪ್ ಬೈಜಾಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಜೇಟ್ಲಿ, 'ಅವರು ನನ್ನ ಜೊತೆನೂ ಕೆಲಸ ಮಾಡಿದ್ದಾರೆ. ಅವರು ಒಬ್ಬ ದಕ್ಷ ಮತ್ತು ಉತ್ತಮ ಅಧಿಕಾರಿ' ಎಂದರು.

'ಬೈಜಾಲ್ ಅವರನ್ನು ಗುರಿಯಾಗಿಸಿಕೊಂಡು ಯುಪಿಎ ಸರ್ಕಾರ ಕಿರುಕುಳ ನೀಡಿದೆ. ಅವರು ನಿವೃತ್ತಿ ನಂತರ ನನ್ನನ್ನು ಭೇಟಿ ಮಾಡಿದ್ದರು ಮತ್ತು ಅವರಿಗೆ ಕಿರುಕುಳ ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು' ಎಂದು ಜೇಟ್ಲಿ ಹೇಳಿದ್ದಾರೆ.

ಮಾಜಿ ದೂರಸಂಪರ್ಕ ಸಚಿವ ದಯಾನಿಧಿ ಮಾರನ್‌ಗೆ ಸಹಕರಿಸದಿದ್ದರೆ ಪರಿಸ್ಥಿತಿ ಗಂಭೀರವಾಗಬಹುದು ಎಂದು ಮಾಜಿ ಪ್ರಧಾನಿ ಸಿಂಗ್ ಎಚ್ಚರಿಸಿದ್ದರು ಎಂದು ಬೈಜಾಲ್ ಆರೋಪಿಸಿದ್ದಾರೆ.

ಸಿಂಗ್ ಅವರು ಸಮ್ಮಿಶ್ರ ಸರ್ಕಾರದ ಮೈತ್ರಿ ಧರ್ಮಕ್ಕೆ ಕಟ್ಟುಬಿದ್ದಿದ್ದರು. ಮಾರನ್ ಹೇಳಿದ್ದನ್ನೆಲ್ಲ ಪಾಲಿಸುವಂತೆ ಸೂಚಿಸಿದ್ದರು ಎಂದು 2ಜಿ ಪ್ರಕರಣದಲ್ಲಿ ತನಿಖೆ ಎದುರಿಸಿದ್ದ ಬೈಜಾಲ್ ತಮ್ಮ
'ದಿ ಕಂಪ್ಲೀಟ್ ಸ್ಟೋರಿ ಆಫ್ ಇಂಡಿಯನ್ ರಿಫಾರ್ಮ್ಸ್: 2ಜಿ, ಪವರ್ ಆಂಡ್ ಪ್ರೈವೇಟ್ ಎಂಟರ್‌ಪ್ರೈಸ್ - ಎ ಪ್ರ್ಯಾಕ್ಟಿಷನರ್ಸ್ ಡೈರಿ'ಯಲ್ಲಿ ಈ ಅಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT