ಅರವಿಂದ ಕೇಜ್ರಿವಾಲ್‌ 
ದೇಶ

ಅಧಿಕಾರಿಗಳ ನೇಮಕ ವಿವಾದ: ಕೇಂದ್ರದ ಅಧಿಸೂಚನೆ ವಿರುದ್ಧ 'ಹೈ' ಮೆಟ್ಟಿಲೇರಿದ ದೆಹಲಿ ಸರ್ಕಾರ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು...

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಆಮ್ ಆದ್ಮಿ ಸರ್ಕಾರ ಗುರುವಾರ ಹೈಕೋರ್ಟ್ ಮೆಟ್ಟಿಲೇರಿದೆ.

ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆ ವಿರುದ್ಧ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ದೆಹಲಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಬಿ.ಡಿ.ಅಹ್ಮದ್‌ ಮತ್ತು ನ್ಯಾಯಮೂರ್ತಿ ಸಂಜೀವ್‌ ಸಚ್‌ದೇವ್‌ ಅವರನ್ನೊಳಗೊಂಡ  ನಾಳೆ ಅರ್ಜಿಯ ವಿಚಾರಣೆ ನಡೆಸಲಿದೆ.

ಲೆಫ್ಟಿನೆಂಟ್ ಗವರ್ನರ್ ನಜೀಬ್‌ ಜಂಗ್‌ ಅವರು, ಶಕುಂತಲಾ ಗ್ಯಾಮ್ಲಿನ್‌ ಅವರನ್ನು ದೆಹಲಿ  ಸರ್ಕಾರದ ಪ್ರಭಾರ ಮುಖ್ಯ ಕಾರ್ಯದರ್ಶಿ ಆಗಿ ನೇಮಿಸಿದ್ದರು. ಆದರೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸರ್ಕಾರದ ಕಾರ್ಯಗಳಲ್ಲಿ ಜಂಗ್‌ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಕೇಜ್ರಿವಾಲ್ ಹಾಗೂ ಜಂಗ್ ನಡುವಿನ ಸಂಘರ್ಷ ಕೇಂದ್ರ ಸರ್ಕಾರ, ರಾಷ್ಟ್ರಪತಿ ಭವನಕ್ಕೂ ಮುಟ್ಟಿತ್ತು. ಈ ಮಧ್ಯೆ, ‘ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆಯಲ್ಲಿ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ಅವರಿಗೆ ವಿವೇಚನಾಧಿಕಾರವಿದೆ’ ಎಂದು ಕೇಂದ್ರ ಗೃಹ ಇಲಾಖೆ ಮೇ 21ರಂದು ಅಧಿಸೂಚನೆ ಹೊರಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT