ಸಲ್ಮಾನ್ ಖಾನ್ 
ದೇಶ

ಸಲ್ಮಾನ್ ಖಾನ್ ಹಿಟ್ ಆಂಡ್ ರನ್ ಪ್ರಕರಣದ ದಾಖಲೆ ಭಸ್ಮ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ 2002ರ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ. ಏಕೆಂದರೆ...

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ 2002ರ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ. ಏಕೆಂದರೆ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳೆಲ್ಲವೂ ಅಗ್ನಿ ಆಕಸ್ಮಿಕದಲ್ಲಿ ಸುಟ್ಟು ಹೋಗಿವೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಪ್ರಕರಣದ ಮಾಹಿತಿ ಕೋರಿ ಆರ್‌ಟಿಐ ಕಾರ್ಯಕರ್ತ ಮನ್ಸೂರ್ ದರ್ವೇಶ್ ಅವರು ರಾಜ್ಯ ಕಾನೂನು ಮತ್ತು ನ್ಯಾಯಾಂಗ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಮಹಾ ಸರ್ಕಾರ, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹಿಂದೆ ನಡೆದಿದ್ದ ಅಗ್ನಿ ಆಕಸ್ಮಿಕದಲ್ಲಿ ಸಲ್ಮಾನ್‌ ಖಾನ್‌ ಪ್ರಕರಣದ ಕಡತಗಳು ಕೂಡ ಭಸ್ಮವಾಗಿರುವುದಾಗಿ ಮಾಹಿತಿ ನೀಡಿದೆ.

ಜೂನ್ 21, 2012ರಂದು ಮಹಾರಾಷ್ಟ್ರದ ಮಂತ್ರಾಲಯದಲ್ಲಿ (ವಿಧಾನಸಭೆ) ನಡೆದಿದ್ದ ಅಗ್ನಿ ಅನಾಹುತದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ಕೂಡ ಸುಟ್ಟು ಹೋಗಿರುವುದರಿಂದ ಮಾಹಿತಿ ಲಭ್ಯವಿಲ್ಲ ಎಂದು ಅರ್ಜಿದಾರರಿಗೆ ತಿಳಿಸಲಾಗಿದೆ.

ಮೇ 6 2002ರಂದು ನಡೆದ ಹಿಟ್ ಆಂಡ್ ರನ್ ಘಟನೆ ನಡೆದಂದಿನಿಂದ ಹಿಡಿದು ಈ ವರ್ಷದ ಸೆಷೆನ್ಸ್ ಕೋರ್ಟ್ ತೀರ್ಪು ನೀಡುವವರೆಗೆ ಪ್ರಕರಣದ ನಿರ್ವಹಣೆಗೆ ರಾಜ್ಯ ಸರಕಾರ ಮಾಡಿರುವ ಖರ್ಚು ಎಷ್ಟು ಎಂದು ಕೂಡ ಅರ್ಜಿದಾರರು ಕೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ ಗೊತ್ತಿರುವುದು ಏಕೈಕ ಮಾಹಿತಿ ಮಾತ್ರ. ಅದರ ಪ್ರಕಾರ, ಪಬ್ಲಿಕ್‌ ಪ್ರಾಸಿಕ್ಯೂಟರ್ ಪ್ರದೀಪ್ ಘರಟ್ ಅವರಿಗೆ ಪ್ರತಿ ಬಾರಿಯ ವಿಚಾರಣೆಗೆ ತಲಾ  ಆರು ಸಾವಿರ ರು. ನೀಡಲಾಗಿದೆ.

ಅಗ್ನಿ ಆಕಸ್ಮಿಕದಲ್ಲಿ  ಬೆಂಕಿಗಾಹುತಿಯಾಗಿರುವ ಕಡತಗಳನ್ನು ಮರು ನಿರ್ಮಾಣ ಮಾಡುವುದಾಗಿ ರಾಜ್ಯ ಸರಕಾರ ಹೇಳಿಕೆ ನೀಡಿತ್ತು. ಆದರೆ ಈವರೆಗೂ ಆ ಕೆಲಸ ಆಗಿಲ್ಲ. ಇದು ಸಕರಾರ ಅದಕ್ಷತೆಗೆ ಸಾಕ್ಷಿಯಾಗಿದೆ. ನಮಗೆ ಹಿಟ್ ಆಂಡ್ ರನ್ ಪ್ರಕರಣದ ಬಗ್ಗೆ ತಾರ್ಕಿಕ ಅಂತ್ಯಕ್ಕೆ ಬರಲು ಸೂಕ್ತ ದಾಖಲೆಗಳು ಬಹಳ ಮಹತ್ವದ್ದಾಗಿದೆ ಎಂದು ಅರ್ಜಿದಾರ ಮನ್ಸೂರ್ ದರ್ವೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT