ಸಲ್ಮಾನ್ ಖಾನ್ 
ದೇಶ

ಸಲ್ಮಾನ್ ಖಾನ್ ಹಿಟ್ ಆಂಡ್ ರನ್ ಪ್ರಕರಣದ ದಾಖಲೆ ಭಸ್ಮ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ 2002ರ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ. ಏಕೆಂದರೆ...

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ 2002ರ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ. ಏಕೆಂದರೆ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳೆಲ್ಲವೂ ಅಗ್ನಿ ಆಕಸ್ಮಿಕದಲ್ಲಿ ಸುಟ್ಟು ಹೋಗಿವೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಪ್ರಕರಣದ ಮಾಹಿತಿ ಕೋರಿ ಆರ್‌ಟಿಐ ಕಾರ್ಯಕರ್ತ ಮನ್ಸೂರ್ ದರ್ವೇಶ್ ಅವರು ರಾಜ್ಯ ಕಾನೂನು ಮತ್ತು ನ್ಯಾಯಾಂಗ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಮಹಾ ಸರ್ಕಾರ, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹಿಂದೆ ನಡೆದಿದ್ದ ಅಗ್ನಿ ಆಕಸ್ಮಿಕದಲ್ಲಿ ಸಲ್ಮಾನ್‌ ಖಾನ್‌ ಪ್ರಕರಣದ ಕಡತಗಳು ಕೂಡ ಭಸ್ಮವಾಗಿರುವುದಾಗಿ ಮಾಹಿತಿ ನೀಡಿದೆ.

ಜೂನ್ 21, 2012ರಂದು ಮಹಾರಾಷ್ಟ್ರದ ಮಂತ್ರಾಲಯದಲ್ಲಿ (ವಿಧಾನಸಭೆ) ನಡೆದಿದ್ದ ಅಗ್ನಿ ಅನಾಹುತದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ಕೂಡ ಸುಟ್ಟು ಹೋಗಿರುವುದರಿಂದ ಮಾಹಿತಿ ಲಭ್ಯವಿಲ್ಲ ಎಂದು ಅರ್ಜಿದಾರರಿಗೆ ತಿಳಿಸಲಾಗಿದೆ.

ಮೇ 6 2002ರಂದು ನಡೆದ ಹಿಟ್ ಆಂಡ್ ರನ್ ಘಟನೆ ನಡೆದಂದಿನಿಂದ ಹಿಡಿದು ಈ ವರ್ಷದ ಸೆಷೆನ್ಸ್ ಕೋರ್ಟ್ ತೀರ್ಪು ನೀಡುವವರೆಗೆ ಪ್ರಕರಣದ ನಿರ್ವಹಣೆಗೆ ರಾಜ್ಯ ಸರಕಾರ ಮಾಡಿರುವ ಖರ್ಚು ಎಷ್ಟು ಎಂದು ಕೂಡ ಅರ್ಜಿದಾರರು ಕೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ ಗೊತ್ತಿರುವುದು ಏಕೈಕ ಮಾಹಿತಿ ಮಾತ್ರ. ಅದರ ಪ್ರಕಾರ, ಪಬ್ಲಿಕ್‌ ಪ್ರಾಸಿಕ್ಯೂಟರ್ ಪ್ರದೀಪ್ ಘರಟ್ ಅವರಿಗೆ ಪ್ರತಿ ಬಾರಿಯ ವಿಚಾರಣೆಗೆ ತಲಾ  ಆರು ಸಾವಿರ ರು. ನೀಡಲಾಗಿದೆ.

ಅಗ್ನಿ ಆಕಸ್ಮಿಕದಲ್ಲಿ  ಬೆಂಕಿಗಾಹುತಿಯಾಗಿರುವ ಕಡತಗಳನ್ನು ಮರು ನಿರ್ಮಾಣ ಮಾಡುವುದಾಗಿ ರಾಜ್ಯ ಸರಕಾರ ಹೇಳಿಕೆ ನೀಡಿತ್ತು. ಆದರೆ ಈವರೆಗೂ ಆ ಕೆಲಸ ಆಗಿಲ್ಲ. ಇದು ಸಕರಾರ ಅದಕ್ಷತೆಗೆ ಸಾಕ್ಷಿಯಾಗಿದೆ. ನಮಗೆ ಹಿಟ್ ಆಂಡ್ ರನ್ ಪ್ರಕರಣದ ಬಗ್ಗೆ ತಾರ್ಕಿಕ ಅಂತ್ಯಕ್ಕೆ ಬರಲು ಸೂಕ್ತ ದಾಖಲೆಗಳು ಬಹಳ ಮಹತ್ವದ್ದಾಗಿದೆ ಎಂದು ಅರ್ಜಿದಾರ ಮನ್ಸೂರ್ ದರ್ವೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT