ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ದೂರ ದೃಷ್ಠಿಯಿಲ್ಲದ ಕಾಂಗ್ರೆಸ್ ನೀತಿ: ಪ್ರಧಾನಿ ಮೋದಿ ಟೀಕೆ

60 ವರ್ಷಗಳಿಂದ ಭಾರತದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ, ದೂರ ದೃಷ್ಟಿಯಿಲ್ಲದ ನೀತಿಗಳನ್ನು ಜಾರಿ ಮಾಡಿ ಭಾರತದಲ್ಲಿ ಬಡತನ ನೆಲೆಯೂರುವಂತೆ ಮಾಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: 60 ವರ್ಷಗಳಿಂದ ಭಾರತದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ, ದೂರ ದೃಷ್ಟಿಯಿಲ್ಲದ ನೀತಿಗಳನ್ನು ಜಾರಿ ಮಾಡಿ ಭಾರತದಲ್ಲಿ ಬಡತನ ನೆಲೆಯೂರುವಂತೆ ಮಾಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕೆಗಳ ಕುರಿತಂತೆ ಇಂದು ನವದೆಹಲಿಯಲ್ಲಿ ಕಿಡಿಕಾರಿರುವ ಅವರು, 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದೂರ ದೃಷ್ಟಿಯಿಲ್ಲದ ನೀತಿಗಳನ್ನು ಜಾರಿಗೆ ತಂದು ಇಂದಿಗೂ ಭಾರತದಲ್ಲಿ ಬಡತನವೆಂಬ ಪಿಡುಗು ನೆಲೆಯೂರುವಂತೆ ಮಾಡಿದೆ. ಬಡತನ ನಿರ್ಮೂಲನೆ ಮಾಡುವುದು ಇಂದಿಗೂ ಸವಾಲಿನ ಕೆಲಸವಾಗಿದೆ. ಸೂಟ್ ಕೇಸ್ ತೆಗೆದುಕೊಳ್ಳುತ್ತಿದ್ದ ಕಾಂಗ್ರೆಸ್ ಪಕ್ಷಕ್ಕಿಂತ ಸೂಟುಬೂಟು ಹಾಕುತ್ತಿರುವ ನಮ್ಮ ಸರ್ಕಾರವೆಷ್ಟೋ ಲೇಸು ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಬಡ ಜನರ ಪರವಾಗಿದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ಬಡಜನರ ಪಕ್ಷವಾಗಿದ್ದೇ ಆದರೆ, ಇಂದಿಗೂ ಭಾರತದಲ್ಲಿ ಬಡತನವೇಕೆ ತಾಂಡವವಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷವು ತನ್ನ ಆಡಳಿತದಲ್ಲಿ ಭಾರತಕ್ಕೆ ಕಲ್ಲಿದ್ದಲು ಹಗರಣ ಹಾಗೂ 2ಜಿ ಹಗರಣದಂತಹ ಬಹುದೊಡ್ಡ ಅತ್ಯಮೂಲ್ಯ ಉಡುಗೊರೆಗಳನ್ನು ನೀಡಿದೆ. ಇದನ್ನು ಜನ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸೇನೆಯಿಂದ ನಿವೃತ್ತಿ ಹೊಂದಿರುವವರಿಗೆ ಸಮಾನ ಶ್ರೇಣಿ ಹಾಗೂ ಸಮಾನ ವೇತನ ಯೋಜನೆ ಕುರಿತಂತೆ ಕಾಂಗ್ರೆಸ್ ಟೀಕೆಗಳ ವಿರುದ್ಧ ಕಿಡಿಕಾರಿರುವ ಮೋದಿ ಅವರು, ಸಮಾನ ವೇತನ ಹಾಗೂ ಸಮಾನ ಶ್ರೇಣಿ ಕುರಿತಂತೆ ಟೀಕೆ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಕ್ಕಿಲ್ಲ. ಸೇನೆಯಿಂದ ನಿವೃತ್ತಿಯಾದವರು ಕಳೆದ 57 ವರ್ಷಗಳಿಂದ ಸಮಾನ ವೇತನ, ಸಮಾನ ಶ್ರೇಣಿಗಾಗಿ ಒತ್ತಾಯಿಸುತ್ತಿದ್ದರು. ಆದರೆ, ಆಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇಂದು ನಿವೃತ್ತ ಸೇನಾಧಿಕಾರಿಗಳಗೆ ಸೇವೆಗಳನ್ನು ಒದಗಿಸುತ್ತಿರುವ ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡಲು ಕಾಂಗ್ರೆಸ್ ಮುಂದಾಗಿದ್ದು, ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT