ಲೋಕಸಭೆ 
ದೇಶ

ಭೂಸ್ವಾಧೀನ ಸುಗ್ರೀವಾಜ್ಞೆ: 3ನೇ ಬಾರಿಗೆ ಕೇಂದ್ರ ಸಂಪುಟ ಶಿಫಾರಸು

ಕೇಂದ್ರ ಸಚಿವ ಸಂಪುಟವು ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಮೂರನೇ ಬಾರಿಗೆ ಹೊರಡಿಸಲು ಕೇಂದ್ರ ಸಂಪುಟ ಶನಿವಾರ ಶಿಫಾರಸು ಮಾಡಿದೆ...

ನವದೆಹಲಿ: ಕೇಂದ್ರ ಸಚಿವ ಸಂಪುಟವು ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಮೂರನೇ ಬಾರಿಗೆ ಹೊರಡಿಸಲು ಶನಿವಾರ ಶಿಫಾರಸು ಮಾಡಿದೆ.

ಎನ್ ಡಿಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ ಸಿಗದ ಕಾರಣ ಎನ್ ಡಿಎ ಸರ್ಕಾರ ಮಸೂದೆಯನ್ನು ರಾಜ್ಯಸಭೆಗೆ ಕಳುಹಿಸಿರಲಿಲ್ಲ.

ನಂತರ 2015ರ ಮಾರ್ಚ್ ತಿಂಗಳಿನಲ್ಲಿ ಎರಡನೇ ಬಾರಿಗೆ ಮಸೂದೆಯನ್ನು ಮಂಡಿಸಲಾಗಿತ್ತು. ಮಸೂದೆಗೆ ಮೇಲ್ಮನೆಯಲ್ಲಿ ಒಪ್ಪಿಗೆ ದೊರೆಯದ ಕಾರಣ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಭೂಸ್ವಾಧೀನ ಸುಗ್ರೀವಾಜ್ಞೆಯ ಅವಧಿಯು ಇದೇ ಜೂನ್ 4ಕ್ಕೆ ಮುಕ್ತಾಯವಾಗಲಿದ್ದು, ಏಪ್ರಿಲ್ 23ರಂದು ರಾಜ್ಯಸಭಾ ಅಧಿವೇಶನ ಸಮಾವೇಶಗೊಂಡ ಆರು ವಾರಗಳ ಬಳಿಕ ಸುಗ್ರೀವಾಜ್ಞೆಯ ಅವಧಿ ಮುಗಿಯಲಿದೆ. ಅಧಿವೇಶನದಲ್ಲಿ ಸುಗ್ರೀವಾಜ್ಞೆಯ ಬದಲಿಗೆ ಕಾನೂನನ್ನು ಅಂಗೀಕರಿಸಬೇಕಾಗಿತ್ತು. ವಿಪಕ್ಷಗಳ ತೀವ್ರ ವಿರೋಧದಿಂದ ಅದು ಸಾಧ್ಯವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ವಿಷಯವನ್ನು ಶನಿವಾರ ನಡೆದ ಕೇಂದ್ರ ಸಚಿವ ಸಂಪುಟದ ಕಾರ್ಯಸೂಚಿಯಲ್ಲಿ ಸೇರಿಸಲಾಗಿತ್ತು. ಪ್ರಸ್ತುತ ಜಾರಿಯಲ್ಲಿ ಇರುವ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಆಧರಿಸಿದ ಭೂಸ್ವಾಧೀನ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಯು ಪರಿಶೀಲಿಸುತ್ತಿರುವುದರಿಂದ ಸುಗ್ರೀವಾಜ್ಞೆಯನ್ನು ಮರು ಜಾರಿ ಮಾಡಬಹುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪ್ರಸ್ತಾವ ನೀಡಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT