ಸಂಗ್ರಹ ಚಿತ್ರ 
ದೇಶ

ಕೇರಳಕ್ಕೆ ಮುಂದಿನ ವಾರ ಮಾನ್ಸೂನ್ ಪ್ರವೇಶ

ದೇಶಾದ್ಯಂತ ಉರಿ ಬಿಸಿಲಿನ ತಾಪಕ್ಕೆ ತತ್ತರಿಸಿ ಇದುವರೆಗೆ 2005 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ಕೆಲವೆಡೆ ಮುಂಗಾರು ಪೂರ್ವ ಮಳೆಗೆ ಹಲವುಮಂದಿ ಬಲಿಯಾಗಿದ್ದಾರೆ.

ತಿರುವನಂತಪುರ: ದೇಶಾದ್ಯಂತ ಉರಿ ಬಿಸಿಲಿನ ತಾಪಕ್ಕೆ ತತ್ತರಿಸಿ ಇದುವರೆಗೆ 2005 ಮಂದಿ ಸಾವನ್ನಪ್ಪಿದ್ದಾರೆ.  ಜೊತೆಗೆ ಕೆಲವೆಡೆ ಮುಂಗಾರು ಪೂರ್ವ ಮಳೆಗೆ ಹಲವುಮಂದಿ ಬಲಿಯಾಗಿದ್ದಾರೆ.
ಬಿಸಿಲಿನಿಂದ ಬಸವಳಿದಿರುವ ರಾಜ್ಯಗಳಿಗೆ ತಂಪನ್ನೆರೆಯಲು ಮುಂದಿನ ವಾರ ಮುಂಗಾರು ಮಾನ್ಸೂನ್ ಮಾರುತ್ ವಿವಿಧ ರಾಜ್ಯಗಳಿಗೆ ಪ್ರವೇಶಿಸಲಿದೆ.

ವಾಯುವ್ಯ ಮುಂಗಾರು ಮಾರುತ ಮುಂದಿನ ವಾರ ಅಂದರೆ ಜೂನ್ 3 ರ ಒಳಗೆ  ಕೇರಳಕ್ಕೆ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ನೈರುತ್ಯ ದಿಕ್ಕಿನಿಂದ ಪ್ರಬಲ ಗಾಳಿ ಬೀಸಲಿದೆ. ಗಂಟೆಗೆ 45 ರಿಂದ 55 ಕೀಮೀ ವೇಗದಲ್ಲಿ ಬೀಸುವ ಗಾಳಿ ಕೇರಳದ ಕರಾವಳಿ ಮತ್ತು ಲಕ್ಷ ದ್ವೀಪಕ್ಕೆ ಅಪ್ಪಳಿಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳಬಾರದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶ, ಪುದುಚೆರಿ ಹಾಗೂ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT