ರೋಗಿ ನೋಡಲು ಹೋದ ಯುವತಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ! (ಸಾಂದರ್ಭಿಕ ಚಿತ್ರ) 
ದೇಶ

ರೋಗಿ ನೋಡಲು ಹೋದ ಯುವತಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ!

ರೋಗಿ ನೋಡಿಕೊಂಡು ಬರಲು ಹೋಗಿದ್ದ ಯುವತಿಯೊಬ್ಬಳ ಮೇಲೆ ಆಸ್ಪತ್ರೆಯ ಸಿಬ್ಬಂದಿಗಳೇ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಕೋಲ್ಕತಾದ ಆರ್ ಜಿ ಕಾಲೇಜು ಮತ್ತು ವೈದ್ಯಕೀಯ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ...

ಕೋಲ್ಕತಾ: ರೋಗಿ ನೋಡಿಕೊಂಡು ಬರಲು ಹೋಗಿದ್ದ ಯುವತಿಯೊಬ್ಬಳ ಮೇಲೆ ಆಸ್ಪತ್ರೆಯ ಸಿಬ್ಬಂದಿಗಳೇ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಕೋಲ್ಕತಾದ ಆರ್ ಜಿ ಕಾಲೇಜು ಮತ್ತು ವೈದ್ಯಕೀಯ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮುರ್ಷಿದಾಬಾದ್ ಜಿಲ್ಲೆಯ ಬಹ್ರಾಂಪುರ ನಗರದ ನಿವಾಸಿಯಾಗಿರುವ 23 ವರ್ಷದ ಯುವತಿಯೊಬ್ಬಳ ಸಂಬಂಧಿಕರೊಬ್ಬರು ಅನಾರೋಗ್ಯದಿಂದಾಗಿ ಕೋಲ್ಕತಾದ ಆರ್ ಜಿ ಕಾಲೇಜು ಮತ್ತು ವೈದ್ಯಕೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಹೀಗಾಗಿ ರೋಗಿಯನ್ನು ನೋಡಲೆಂದು ಯುವತಿ ಆಸ್ಪತ್ರೆಗೆ ಹೋಗಿದ್ದಳು. ಆಸ್ಪತ್ರೆಯ ಲಿಫ್ಟ್ ನಲ್ಲಿ ಹೋಗುತ್ತಿದ್ದ ಯುವತಿಯನ್ನು ಕಂಡ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳು ಯುವತಿಯನ್ನು ಬಲವಂತದಿಂದ ಎಳೆದು ಆಸ್ಪತ್ರೆಯ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅತ್ಯಾಚಾರಿವಾದ ನಂತರ ಆರೋಪಿಗಳ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ನೀಡಿದ ದೂರಿನ ಅನ್ವಯ ಆಸ್ಪತ್ರೆಯ ಸಿಬ್ಬಂದಿಗಳಾದ ಮಸುಮ್ ಅಲಿ ಖಾನ್ ಮತ್ತು ಹೈದರ್ ಅಲಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಈಗಾಗಲೇ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ವರದಿಗಾಗಿ ಕಾದು ನೋಡಲಾಗುತ್ತಿದೆ. ವರದಿ ಬಂದ ನಂತರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದ ಆಸ್ಪತ್ರೆಯಲ್ಲಿರುವ ಭದ್ರತೆ ಕುರಿತಂತೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಘಟನೆ ನಡೆದಾಗಿನಿಂದ ರೋಗಿಗೆ ಮಧ್ಯರಾತ್ರಿಯಲ್ಲಿ ಔಷಧಿ ತರಬೇಕೆಂದರೂ ಅಥವಾ ಜನರಿಲ್ಲದ ಜಾಗಕ್ಕೆ ಹೋಗಬೇಕೆಂದರು ಬಹಳ ಭಯವಾಗುತ್ತದೆ ಎಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಮಹಿಳಾ ರೋಗಿಯ ಸಂಬಂಧಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT