ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ

ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಮತ್ತು ವಿಪಕ್ಷಗಳು ತೀವ್ರ ಪ್ರತಿರೋಧ ತೋರಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾನುವಾರ ಅಂಕಿತ ಹಾಕಿದ್ದಾರೆ...

ನವದೆಹಲಿ: ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಮತ್ತು ವಿಪಕ್ಷಗಳು ತೀವ್ರ ಪ್ರತಿರೋಧ ತೋರಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾನುವಾರ ಅಂಕಿತ ಹಾಕಿದ್ದಾರೆ.

2 ಬಾರಿ ವಿಫಲವಾಗಿದ್ದ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಮತ್ತೆ ಹೊರಡಿಸಬೇಕು ಎಂದು ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಶಿಫಾರಸ್ಸು ಮಾಡಿತ್ತು. ಇತ್ತೀಚೆಗಷ್ಟೇ ಸಂಸತ್ತಿನ ಜಂಟಿ ಸಮಿತಿಯ ಸಮಿತಿಯ ಪರಿಶೀಲನೆಗೆ ಒಪ್ಪಿಸಿದ್ದ ತಿದ್ದುಪಡಿ ಸಹಿತ ಕಾಯ್ದೆ ಜಾರಿಗೆ ಮೂರನೇ ಬಾರಿಗೆ ಅಂಕಿತ ಹಾಕುವಂತೆ ರಾಷ್ಟ್ರಪತಿಗಳಿಗೆ ಸಚಿವ ಸಂಪುಟ ಸಭೆ ಶಿಫಾರಸು ಮಾಡಿತ್ತು. ಈ ಹಿನ್ನಲೆಯಲ್ಲಿ ಭಾನುವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಿದ್ದುಪಡಿ ಭೂಸ್ವಾಧೀನ ಸುಗ್ರೀವಾರಜ್ಞೆಗೆ ಅಂಕಿತ ಹಾಕಿದ್ದಾರೆ.

ಈ ಹಿಂದೆ ಮಾರ್ಚ್ ನಲ್ಲಿ ಹೊರಡಿಸಲಾಗಿದ್ದ ಭೂಸ್ವಾಧೀನ ಸುಗ್ರೀವಾಜ್ಞೆಯ ಅವಧಿಯು ಜೂನ್ 4ಕ್ಕೆ ಅಂದರೆ ಏಪ್ರಿಲ್ 23ರಂದು ಅಂತ್ಯಗೊಂಡಿತ್ತು. ಅಧಿವೇಶನದಲ್ಲಿ ಸುಗ್ರೀವಾಜ್ಞೆಯ ಬದಲಿಗೆ ಕಾನೂನನ್ನು ಅಂಗೀಕರಿಸಬೇಕಾಗಿತ್ತು. ಆದರೆ ವಿರೋಧ ಪಕ್ಷಗಳ ತೀವ್ರ ವಿರೋಧದ ಕಾರಣದಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ವಿಚಾರವನ್ನು ಶನಿವಾರ ನಡೆದ ಕೇಂದ್ರ ಸಚಿವ ಸಂಪುಟದ ಕಾರ್ಯಸೂಚಿಯಲ್ಲಿ ಸೇರಿಸಲಾಗಿತ್ತು .

ಪ್ರಸ್ತುತ ಜಾರಿಯಲ್ಲಿ ಇರುವ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಆಧರಿಸಿದ ಭೂಸ್ವಾಧೀನ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಯು ಪರಿಶೀಲಿಸುತ್ತಿರುವುದರಿಂದ ಸುಗ್ರೀವಾಜ್ಞೆಯನ್ನು ಮರು ಜಾರಿ ಮಾಡಬಹುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಪ್ರಸ್ತಾವ ಮುಂದಿಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT