ನರೇಂದ್ರ ಮೋದಿ 
ದೇಶ

ಅಲ್ಪ ಸಂಖ್ಯಾತರ ವಿರುದ್ಧ ಸಂಘ ಪರಿವಾರದ ಹೇಳಿಕೆ ಅನಗತ್ಯವಾಗಿತ್ತು: ಮೋದಿ

ಅಲ್ಪಸಂಖ್ಯಾತರ ವಿರುದ್ಧ ಸಂಘ ಪರಿವಾರದ ಮುಖಂಡರು ಹೇಳಿಕೆ ನೀಡುವ ಅಗತ್ಯವಿರಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಅಲ್ಪಸಂಖ್ಯಾತರ ವಿರುದ್ಧ ಸಂಘ ಪರಿವಾರದ ಮುಖಂಡರು ಹೇಳಿಕೆ ನೀಡುವ ಅಗತ್ಯವಿರಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.

ಎನ್ ಡಿಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಯುಎನ್ ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೋದಿ, ದೇಶದ ಜನರಿಗೆ ನಿಜಕ್ಕೂ 'ಒಳ್ಳೆಯ ದಿನಗಳು ಬಂದಿವೆ'. ಆದರೆ ಕೆಲವು ಜನ ನಾವು ಮಾಡಿದ ಕೆಲಸದ ಬಗ್ಗೆ ಉಪೇಕ್ಷೆ ಮಾಡುತ್ತಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಅವರು, ತಮ್ಮ ಸರ್ಕಾರ  ಯಾವುದೇ ನಿರ್ಧಿಷ್ಟ ಸಮುದಾಯದ ವಿರುದ್ಧ ಹಿಂಸೆ ಅಥವಾ ದ್ವೇಷವನ್ನು ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.

ಈ ವೇಳೆ ಸಂಘ ಪರಿವಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಮೋದಿ, ಅಲ್ಪಸಂಖ್ಯಾತರ ವಿರುದ್ಧ ಸಂಘ ಪರಿವಾರದ ಮುಖಂಡರ ಹೇಳಿಕೆ ಅನಗತ್ಯವಾಗಿತ್ತು. ಕಾನುನಿನ ಮುಂದೆ ಎಲ್ಲಾ ಸಮುದಾಯದವರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು. ಪ್ರತಿಯೊಬ್ಬ ನಾಗರಿಕನಿಗೂ ನಮ್ಮ ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಮತ್ತು ಅದರಲ್ಲಿ ಯಾವುದೇ ರಾಜಿ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT