ಅಪರೂಪದ ನರ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿತ್ರ. ( ಫೋಟೋ ಕೃಪೆ: ಐಬಿಎನ್ ಲೈವ್) 
ದೇಶ

ದಯಾ ಮರಣಕ್ಕೆ ಅನುಮತಿ ನೀಡಿ: ನೊಂದ ತಂದೆಯಿಂದ ರಾಷ್ಟ್ರಪತಿಗೆ ಅರ್ಜಿ

ಅಪರೂಪದ ನರ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ಭರಿಸಲಾಗದ ತಂದೆಯೊಬ್ಬರು ದಯಾ ಮರಣಕ್ಕೆ ಒಪ್ಪಿಗೆ ನೀಡುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ...

ನವದೆಹಲಿ: ಅಪರೂಪದ ನರ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ಭರಿಸಲಾಗದ ತಂದೆಯೊಬ್ಬರು ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಮೊಹಮದ್ ನಜೀರ್ ಎಂಬುವವರಿಗೆ 6 ಮಕ್ಕಳಿದ್ದೂ, ಆರು ಮಕ್ಕಳೂ ಅಪರೂಪದ ನರಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಖಾಯಿಲೆಯಿಂದಾಗಿ ಮಕ್ಕಳ ಹೊಟ್ಟೆಯ ಕೆಳಭಾಗದ ಎಲ್ಲಾ ಅಂಗಾಂಗಳು ಪಾರ್ಶ್ವವಾಯುವಿಗೆ ತುತ್ತಾಗಿವೆ. ದಿನದಿಂದ ದಿನಕ್ಕೆ ಮಕ್ಕಳ ಆರೋಗ್ಯ ಹದಗೆಡುತ್ತಿದೆ. ಹೀಗಾಗಿ ಚಿಕಿತ್ಸೆ ವೆಚ್ಚ ಭರಿಸಲಾಗದ ತಂದೆಯೊಬ್ಬರು ಮಕ್ಕಳು ಪಡುತ್ತಿರುವ ರೋಧನೆಯನ್ನು ನೋಡಲಾಗದೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಪತ್ರದಲ್ಲಿ ಮೊಹಮದ್ ನಜೀರ್ ಅವರು ಮಕ್ಕಳ ಖಾಯಿಲೆ ಕುರಿತಂತೆ ಹಾಗೂ ಮಕ್ಕಳ ಕಷ್ಟಗಳ ಕುರಿತಂತೆ ವಿವರಣೆ ನೀಡಿದ್ದು, ಮಕ್ಕಳಿಗೆ ದಯಾ ಮರಣಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಇತರೆ ಮಕ್ಕಳಂತೆ ಓಡಾಡಲು, ಆಟವಾಡಲು ಸಾಧ್ಯವಾಗದೆ ಪ್ರತಿನಿತ್ಯ ನೋವಿನಿಂದ ಬಳಲುತ್ತಿರುತ್ತಾರೆ. ಇನ್ನು ಕೆಲವು ದಿನಗಳ ನಂತರ ಮಕ್ಕಳಿಗೆ ಹೃದಯ ಸಂಬಂಧಿ ತೊಂದರೆ ಕಾಣಿಸಲಿದ್ದು, ರೋಗವನ್ನು ಗುಣಪಡಿಸಲು ಚಿಕಿತ್ಸೆ ಇದೆ ಎಂದು ವೈದ್ಯರು ಹೇಳುತ್ತಾರೆ. ಆದರೆ ಮಕ್ಕಳ ರೋಗವನ್ನು ಗುಣಪಡಿಸುವಷ್ಟು ಹಣ ನನ್ನ ಬಳಿಯಿಲ್ಲ. ಹಾಗಾಗಿ ಮಕ್ಕಳು ಪ್ರತಿನಿತ್ಯ ನೋವಿನಿಂದ ಚೀರುವುದನ್ನು ನೋಡಲು ಸಾಧ್ಯವಾಗುತ್ತಿಲ್ಲ. ದಯಾಮರಣಕ್ಕೆ ಅನುಮತಿ ನೀಡುವಂತೆ ಮೊಹಮದ್ ನಜೀರ್ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT