ಗಡಿನಿಯಂತ್ರಣಾ ರೇಖೆ ಬಳಿ ಕಣ್ಗಾವಲಿರಿಸಿದ ಭಾರತೀಯ ಸೈನಿಕರು 
ದೇಶ

ಭಾರತದೊಳಗೆ ನುಸುಳಲು ಗಡಿಯಾಚೆ 300 ಉಗ್ರರು ಕಾದು ನಿಂತಿದ್ದಾರೆ!

ಚಳಿಗಾಲ ಕಾಲಿಡುವ ಮುನ್ನ ಭಾರತದೊಳಗೆ ನುಸುಳಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಗಡಿ ನಿಯಂತ್ರಣಾ ರೇಖೆಯ ಬಳಿ ಸುಮಾರು 300...

ನವದೆಹಲಿ: ಚಳಿಗಾಲ ಕಾಲಿಡುವ ಮುನ್ನ ಭಾರತದೊಳಗೆ ನುಸುಳಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಗಡಿ ನಿಯಂತ್ರಣಾ ರೇಖೆಯ ಬಳಿ ಸುಮಾರು 300 ಉಗ್ರರು ಕಾದು ನಿಂತಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
ಭಾರತೀಯ ಸೇನೆಯ ಜನರಲ್ ಆಫೀಸರ್ (ಕಮಾಂಡಿಂಗ್) ಲೆ. ಜ. ಎಸ್ ಕೆ ದುವಾ ಅವರು ಈ ವಿಷಯ ತಿಳಿಸಿದ್ದು , ಭಾನುವಾರ ಗುರೇಜ್ ಬಳಿಯಿರುವ ಗಡಿನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ ಬೆನ್ನಲ್ಲೇ ಉಗ್ರರನ್ನು ನುಸುಳುವಂತೆ ಪ್ರೇರೇಪಿಸುತ್ತಿದೆ ಎಂದಿದ್ದಾರೆ.
ಗಡಿನಿಯಂತ್ರಣಾ ರೇಖೆಯಲ್ಲಿ ಮಂಜು ಬೀಳುತ್ತಿರುವ ಸಂದರ್ಭದಲ್ಲೇ ಕದನ ವಿರಾಮ ಉಲ್ಲಂಘಿಸಿ, ಅದರ ನಡುವೆ ಉಗ್ರರನ್ನು ಕಾಶ್ಮೀರಕ್ಕೆ ನುಸುಳುವಂತೆ ಮಾಡುವುದು ಪಾಕ್ ಉದ್ದೇಶ ಎಂದು ಜನರಲ್ ದುವಾ ಹೇಳಿದ್ದಾರೆ.
ಚಳಿಗಾಲ ಆರಂಭವಾಗುವ ಮುನ್ನವೇ ಅವರು ಭಾರತದೊಳಗೆ ನುಸುಳಲು ಯೋಜನೆ ರೂಪಿಸಿದ್ದಾರೆ. ಒಂದು ವೇಳೆ ಅವರು ನುಸುಳಿದರೂ, ಗುಂಡಿನ ಕಾಳಗ ಮಾಡಿ ವಾಪಸ್ ಹೋಗುವ ಸಾಧ್ಯತೆಯಿದೆ.
ಈಗಾಗಲೇ ಗಡಿ ನಿಯಂತ್ರಣಾ ರೇಖೆಯ ಬಳಿ ಬಿಗಿ ಭದ್ರತೆ ಏರ್ಪಡಿಸಿದ್ದು, ಹೊರಗಿನಿಂದ ಯಾರೊಬ್ಬರೂ ನುಸುಳದಂತೆ  ಸೇನೆ ಕಣ್ಗಾವಲು ಇರಿಸಿದೆ ಎಂದು ಎಂದು ಸೇನಾಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT