ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ (ಸಂಗ್ರಹ ಚಿತ್ರ) 
ದೇಶ

ನಿರ್ಭಯಾಗೆ ಸೂಕ್ತ ನ್ಯಾಯ ಸಿಕ್ಕಿಲ್ಲ: ಮನೇಕಾ ಗಾಂಧಿ

ದೆಹಲಿ ಗ್ಯಾಂಗ್‍ರೇಪ್‍ನಲ್ಲಿ ಭಾಗಿಯಾಗಿರುವ ಬಾಲಾರೋಪಿ ಮುಂದಿನ ತಿಂಗಳು ಜೈಲಿಂದ ಬಿಡುಗಡೆಯಾಗಲಿದ್ದಾನೆ. ಅದಕ್ಕೆ ಪೂರಕವಾಗಿ ಸೋಮವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ``ನಿರ್ಭಯಾಗೆ...

ನವದೆಹಲಿ: ದೆಹಲಿ ಗ್ಯಾಂಗ್‍ರೇಪ್‍ನಲ್ಲಿ ಭಾಗಿಯಾಗಿರುವ ಬಾಲಾರೋಪಿ ಮುಂದಿನ ತಿಂಗಳು ಜೈಲಿಂದ ಬಿಡುಗಡೆಯಾಗಲಿದ್ದಾನೆ. ಅದಕ್ಕೆ ಪೂರಕವಾಗಿ ಸೋಮವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ``ನಿರ್ಭಯಾಗೆ ಸೂಕ್ತ ನ್ಯಾಯ ಒದಗಿಸಿಕೊಟ್ಟಂತೆ ಆಗಲಿಲ್ಲ.

ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಬಾಲಾರೋಪಿ ಮೇಲೆ ಹೆಚ್ಚಿನ ನಿಗಾ ಇರಿಸಬೇಕು. ಆತ ಮತ್ತೊಂದು ಹೀನ ಕೃತ್ಯ ಎಸಗುವ ವರೆಗೆ ಕಾಯುವಂತಾಗಬಾರದು. ಈ ಬಗ್ಗೆ ಸಂಬಂಧಿತ ಅಧಿಕಾರಿಗಳ ಜತೆ ಚರ್ಚಿಸುತ್ತೇನೆ'' ಎಂದಿದ್ದಾರೆ. ಅತ್ಯಾಚಾರ ಮತ್ತು ಕೊಲೆಯಂಥ ಹೀನ ಕೃತ್ಯ ಎಸಗಿದರೂ ಆತನಿಗೆ ಕಠಿಣ ಶಿಕ್ಷೆ ವಿಧಿಸಲು ಸಾಧ್ಯವಾಗಲಿಲ್ಲ ಎಂಬ ಕೊರಗು ತಮಗೆ ಇದೆ ಎಂದೂ ಹೇಳಿದ್ದಾರೆ.

ಇದೇ ವೇಳೆ ಮನೇಕಾ ಹೇಳಿಕೆಗೆ ಬಾಲಾರೋಪಿ ಹೆತ್ತವರು ಆಕ್ಷೇಪಿಸಿದ್ದಾರೆ. ಜೈಲಿಗೆ ಹೋದ ಬಳಿಕ ಆತನಲ್ಲಿ ಸುಧಾರಣೆಯಾಗಿದೆಯೇ, ದೇಶದಲ್ಲಿ ಸಾವಿರಾರು ಹೆಣ್ಣುಮಕ್ಕಳ ಅತ್ಯಾಚಾರ ನಡೆಯುತ್ತಿದೆ. ಏನಾದರೂ ಪರಿಸ್ಥಿತಿ ಸುಧಾರಣೆಯಾಗಿದೆಯೇ''ಎಂದು ಬಾಲಾರೋಪಿಯ ತಾಯಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT