ಮದನ್ ಮಿತ್ರಾ 
ದೇಶ

ಶಾರದ ಚಿಟ್ ಫಂಡ್ ಹಗರಣ: ಮದನ್ ಮಿತ್ರಾ ಆಸ್ಪತ್ರೆಗೆ ದಾಖಲು

ಶಾರದ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಸಚಿವಾರಗಿದ್ದ ಮದನ್ ಮಿತ್ರಾ ಅನಾರೋಗ್ಯದ...

ಕೊಲ್ಕತಾ: ಶಾರದ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಸಚಿವಾರಗಿದ್ದ ಮದನ್ ಮಿತ್ರಾ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮದನ್ ಮಿತ್ರಾ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಹೈಕೋರ್ಟ್ ಮೊರೆ ಹೋಗುತ್ತಿದ್ದಂತೆ ಇತ್ತ ಮದನ್ ಮಿತ್ರಾ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮದನ್ ಅವರನ್ನು ಭೋವಾನಿಪೋರ್ ಪ್ರದೇಶದಲ್ಲಿರುವ ಅವರ ನಿವಾಸದಿಂದ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವುಂಡ್ ಲ್ಯಾಂಡ್ ಆಸ್ಪತ್ರೆಗೆ ಇಂದು ಬೆಳಿಗ್ಗೆ 10.30ಕ್ಕೆ ಮದನ್ ಮಿತ್ರಾ ಅವರು ದಾಖಲಾಗಿದ್ದಾರೆ. 
ಅಲಿಪೋರ್ ಕೋರ್ಟ್ ಮಿತ್ರಾ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಹಾಗೂ ಮದನ್ ಮಿತ್ರಾ ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಸಿಬಿಐ ಇಂದು ಬೆಳಿಗ್ಗೆ ಹೈಕೋರ್ಟ್ ಮೊರೆ ಹೋಗಿತ್ತು. 
ಶಾರದಾ ಚಿಟ್ ಫಂಡ್ ಹಗರಣದಲ್ಲಿ ಒಳಸಂಚು, ಅಧಿಕಾರ ದುರುಪಯೋಗ, ಹಣ ಹೂಡಿಕೆ ಮುಂತಾದ ಮೇಲ್ನೋಟ ವಿಚಾರಗಳಿಗೆ ಸಂಬಂಧಿಸಿದಂತೆ ಮದನ್ ಮಿತ್ರಾ ಅವರನ್ನು 2014ರ ಡಿಸೆಂಬರ್ ತಿಂಗಳಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT