ಸುಬ್ರಮಣಿಯನ್ ಸ್ವಾಮಿ- ಸುಪ್ರೀಂ ಕೋರ್ಟ್ 
ದೇಶ

ಸುಬ್ರಮಣಿಯನ್ ಪುಸ್ತಕದಿಂದ ಕೋಮುದ್ವೇಷ: ಸುಪ್ರೀಂ ಮೊರೆ ಹೋದ ಕೇಂದ್ರ ಸರ್ಕಾರ

ಬಿಜೆಪಿ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿಯವರು 2006ರಲ್ಲಿ ಬರೆದ ``ಟೆರ ರಿಸಂ ಇನ್ ಇಂಡಿಯಾ''ಪುಸ್ತಕ ದೇಶದಲ್ಲಿ ಕೋಮು ದ್ವೇಷದ...

ನವದೆಹಲಿ: ಬಿಜೆಪಿ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿಯವರು 2006ರಲ್ಲಿ ಬರೆದ ``ಟೆರ ರಿಸಂ ಇನ್ ಇಂಡಿಯಾ''ಪುಸ್ತಕ ದೇಶದಲ್ಲಿ ಕೋಮು ದ್ವೇಷದ ವಾತಾವರಣ ಹರಡುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಲ್ಲಿ ಅಫಿಡವಿಟ್ ಸಲ್ಲಿಸಿದೆ. 
ಪುಸ್ತಕದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವ ವಾತಾವರಣ ಅಂಶವಿದೆ ಎಂದು ಗೃಹ ಸಚಿವಾಲಯ ಸಲ್ಲಿಸಿರುವ ಅಫಿಡವಿಟ್ ಬಲವಾಗಿ ಪ್ರತಿಪಾದಿಸಿದೆ. ಅಸಹಿಷ್ಣುತೆ ವಿರುದ್ಧ ಕೇಂದ್ರದ ವಿರುದ್ಧ ಟೀಕಾ ಪ್ರಹಾರ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವಾಲಯ ಬಿಜೆಪಿ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿರುದ್ಧದ ದಾಖಲಾಗಿರುವ ದ್ವೇಷ ಪೂರಿತ ಭಾಷಣ ಮಾಡಿದ್ದರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಸುಪ್ರೀಂ ಕೋರ್ಟಲ್ಲಿ ಮಂಗಳವಾರ ಸಮರ್ಥಿಸಿ ಕೊಂಡಿದೆ. 
ಯಾರೊಬ್ಬರಿಗೂ ಸಮುದಾಯಗಳ ನಡುವೆ ದ್ವೇಷಮಯ ವಾತಾವರಣ ಸೃಷ್ಟಿಸಲು ಅವಕಾಶ ಕೊಡುವುದಿಲ್ಲ. ಅಂಥ ಬೆಳವಣಿಗೆಗಳು ನಡೆದಲ್ಲಿ ಅಂಥವರ ವಿರುದ್ಧ ಕೇಸು ದಾಖಲಿಸುವುದಾಗಿ ತಿಳಿಸಿದೆ. ಬೆಳವಣಿಗೆ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ಡಾ.ಸ್ವಾಮಿ, ``2006ರಲ್ಲಿ ಅಂದರೆ ಯುಪಿಎ ಸರ್ಕಾರದ ಅವಧಿಯಲ್ಲಿ ತೊಂದರೆ ಕೊಡದೇ ಇದ್ದ ಪುಸ್ತಕ 2015ರಲ್ಲಿ ಹೇಗೆ ತೊಂದರೆ ನೀಡಲು ಸಾಧ್ಯ? ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗಮನಕ್ಕೂ ಬಾರದೆ ಈ ವಿಚಾರ ಕೋರ್ಟ್‍ಗೆ ಸಲ್ಲಿಕೆಯಾಗಿದೆ. ಅವರ ಜತೆ ಈ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದ ಅಫಿಡವಿಟ್‍ಗೆ ಪ್ರತಿಯಾಗಿ ಮತ್ತೊಂದು ಪ್ರಮಾಣ ಪತ್ರ ಸಲ್ಲಿಸಲಿದ್ದೇನೆ'' ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT