ನರೇಂದ್ರ ಮೋದಿ- ನಿತೀಶ್ ಕುಮಾರ್ 
ದೇಶ

ಬಿಹಾರದಲ್ಲಿ ಚುನಾವಣೆ ಜಾಹೀರಾತುಗಳಿಗೆ ಸೆನ್ಸಾರ್

ಬಿಹಾರದಲ್ಲಿ ನಡೆಯುತ್ತಿರುವ `ಗೋಮಾಂಸ ಜಾಹೀರಾತಿನ ರಾಜಕೀಯ'ದ ಫಲವಾಗಿ ಚುನಾವಣಾ ಆಯೋಗ ತನ್ನ...

ನವದೆಹಲಿ/ ಪಟನಾ: ಬಿಹಾರದಲ್ಲಿ ನಡೆಯುತ್ತಿರುವ `ಗೋಮಾಂಸ ಜಾಹೀರಾತಿನ ರಾಜಕೀಯ'ದ ಫಲವಾಗಿ ಚುನಾವಣಾ ಆಯೋಗ ತನ್ನ ಅನುಮತಿಯಿಲ್ಲದೆ ಯಾವುದೇ ಜಾಹೀರಾತು ಪ್ರಕಟಿಸದಂತೆ ರಾಜಕೀಯ ಪಕ್ಷಗಳಿಗೆ ಆದೇಶ ನೀಡಿದೆ. 
ಇದೇ ಮೊದಲ ಬಾರಿಗೆ ಆಯೋಗವು ಈ ಬಗೆಯ ಸೆನ್ಸಾರ್ ವಿಧಿಸಿದೆ. ಅದರಂತೆ, ಗುರುವಾರ ನಡೆಯಲಿರುವ ಕೊನೇ ಹಂತದ ಮತದಾನಕ್ಕೆ ಮುನ್ನ ಯಾವುದೇ ಜಾಹೀರಾತು ಆಯೋಗದ ಸೆನ್ಸಾರ್ ಇಲ್ಲದೆ ಎಲ್ಲೂ ಪ್ರಕಟವಾಗು ವಂತಿಲ್ಲ. ಬಿಜೆಪಿಯ `ಗೋಮಾಂಸ' ಜಾಹಿರಾತಿನ ಕುರಿತು ಕ್ರಮ ಕೈಗೊಳ್ಳುವಂತೆ ಕೋರಿ ಪ್ರತಿ ಪಕ್ಷಗಳು ಆಯೋಗದ ಮೆಟ್ಟಿಲೇರಿದ ಬಳಿಕ ಆಯೋಗದ ಈ ನಡೆ ಪ್ರಕಟವಾಗಿದೆ. 
ಗೋಹತ್ಯೆ ಮತ್ತು ಗೋಮಾಂಸ ಭಕ್ಷಣೆಯ ಬಗ್ಗೆ ಸಹೋದ್ಯೋಗಿಗಳು ಮತ್ತು ಮಿತ್ರಪಕ್ಷಗಳು ನೀಡಿರುವ ವಿವಾದಾತ್ಮಕ ಹೇಳಿಕೆಗಳಿಗೆ ನಿತೀಶ್ ಮೌನ ತಾಳಿದ್ದು, ಆದ್ದರಿಂದ ಅವರೂ ಈ ಅಭಿಪ್ರಾಯಗಳನ್ನು ಸಮರ್ಥಿಸುತ್ತಿದ್ದಾರೆ ಎಂಬ ಅರ್ಥದ ಜಾಹೀರಾತನ್ನು ಬಿಜೆಪಿ ಮಂಗಳವಾರ ಪ್ರಕಟಿಸಿತ್ತು. ಬಿಜೆಪಿ ಜಾಹೀರಾತಿನಲ್ಲಿ ಒಬ್ಬಾಕೆ ಸ್ತ್ರೀ ಒಂದು ಗೋವನ್ನು ತಬ್ಬಿಕೊಂಡಿರುವ ಚಿತ್ರವಿದೆ. 
ಜತೆಗೆ ಆರ್‍ಜೆಡಿ ನಾಯಕ ಲಾಲು, ಸಹೋದ್ಯೋಗಿ ರಘುವಂಶ ಪ್ರಸಾದ್ ಸಿಂಗ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ವಿವಾದಾತ್ಮಕ ಹೇಳಿಕೆಗಳನ್ನು ಅಚ್ಚುಮಾಡಿ, ಈ ಹೇಳಿಕೆಗಳಿಗೆ ನಿತೀಶ್ ಸಮ್ಮತಿಯಿದೆಯೇ ಎಂದು ಪ್ರಶ್ನಿಸಲಾಗಿತ್ತು. ಇದರಿಂದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಕೆರಳಿದ್ದು, ಇದು ಮತೀಯ ದ್ವೇಷ ಹರಡುವ ಮೂಲಕ ಚುನಾವಣೆ ಧ್ರುವೀಕರಣಾ ಯತ್ನ ಎಂದು ದೂರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT