ಸತ್ಬಿರ್ ಸಿಂಗ್ 
ದೇಶ

ಅಸಹಿಷ್ಣುತೆ ವಿರುದ್ಧ ಪ್ರತಿಭಟನೆಗೆ ಮಾಜಿ ಸೈನಿಕರ ಸಾಥ್; ಪದಕ ಹಿಂದಿರುಗಿಸುವುದಾಗಿ ಬೆದರಿಕೆ

ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಅಸಹಿಷ್ಣುತೆ ವಿರೋಧಿಸಿ ಸಾಹಿತಿಗಳು, ಚಿತ್ರಿ ನಿರ್ಮಾಪಕರು ತಮ್ಮ ರಾಷ್ಟ್ರ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ...

ನವದೆಹಲಿ: ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಅಸಹಿಷ್ಣುತೆ ವಿರೋಧಿಸಿ ಸಾಹಿತಿಗಳು, ಚಿತ್ರಿ ನಿರ್ಮಾಪಕರು ತಮ್ಮ ರಾಷ್ಟ್ರ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಪ್ರತಿಭಟನೆಗೆ ಇದೀಗ ಮಾಜಿ ಸೈನಿಕರು ಸಾಥ್ ನೀಡಿದ್ದು, ತಮ್ಮ ಪದಕಗಳನ್ನು ಹಿಂದಿರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಅಸಹಿಷ್ಣುತೆ ವಿರೋಧಿಸಿ ದೇಶಾದ್ಯಂತ ಮಾಜಿ ಸೈನಿಕರು ತಮ್ಮ ಪದಕಗಳನ್ನು ಜಿಲ್ಲಾಧಿಕಾರಿಗಳಿಗೆ ವಾಪಸ್ ನೀಡಲಿದ್ದಾರೆ ಎಂದು ನಿವೃತ್ತ ಮೇಜರ್ ಜನರಲ್ ಸತ್ಬಿರ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

'ನಾವು ನಮ್ಮ ಪದಕಗಳನ್ನು ಹಿಂದಿರುಗಿಸುತ್ತೇವೆ ಮತ್ತು ಕಪ್ಪು ದೀಪಾವಳಿ ಆಚರಿಸುವ ಮೂಲಕ ಪ್ರತಿಭಟಿಸುವುದಾಗಿ' ಸಿಂಗ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ವಿರೋಧಿಸಿ ನಿನ್ನೆಯಷ್ಟೇ ಸಾಹಿತಿ ಅರುಂಧತಿ ರಾಯ್ ಹಾಗೂ ಇತರೆ 23 ರಾಷ್ಟ್ರ ಪ್ರಶಸ್ತಿ ವಿಜೇತರು ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT