ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಮಾಜಿ ಸೈನಿಕರು 
ದೇಶ

ಒಆರ್‌ಒಪಿ: ಪ್ರತಿಭಟನಾನಿರತ ಸೇನಾ ಹಿರಿಯರಿಂದ ಪದಕ ವಾಪಸ್

ಸಮಾನ ಪಿಂಚಣಿ, ಸಮಾನ ವೇತನ(ಒಆರ್‌ಒಪಿ) ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸೇನಾ ಪಡೆಗಳ ಹಿರಿಯರು...

ನವದೆಹಲಿ: ಸಮಾನ ಪಿಂಚಣಿ, ಸಮಾನ ವೇತನ(ಒಆರ್‌ಒಪಿ) ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸೇನಾ ಪಡೆಗಳ ಹಿರಿಯರು, ನವೆಂಬರ್ 9 ಹಾಗೂ 10ರಂದು ತಮ್ಮ ಪದಕಗಳನ್ನು ಹಿಂದಿರುಗಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.

'ದೇಶಾದ್ಯಂತ ನಮ್ಮ ಪದಕಗಳನ್ನು ವಾಪಸ್ ಮಾಡಲು ನಾವು ಸರ್ವಾನುಮತದಿಂದ ನಿರ್ಧಾರ ತೆಗೆದುಕೊಂಡಿದ್ದೇವೆ' ಎಂದು ಭಾರತೀಯ ಮಾಜಿ ಸೈನಿಕರ ಚಳವಳಿಯ ಪ್ರಧಾನ ಕಾರ್ಯದರ್ಶಿ, ಗ್ರೂಪ್ ಕ್ಯಾಪ್ಟನ್ ವಿ.ಕೆ.ಗಾಂಧಿ ಅವರು ಹೇಳಿದ್ದಾರೆ.

ಒಆರ್‌ಒಪಿ ಯೋಜನೆ ಜಾರಿಗಾಗಿ ಮಾಜಿ ಸೈನಿಕರು ಕಳೆದ 145 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 5ರಂದು ಕೇಂದ್ರ ಸರ್ಕಾರ ಯೋಜನೆ ಜಾರಿಗೊಳಿಸುವುದಾಗಿ ಘೋಷಿಸಿದರೂ ಮಾಜಿ ಸೈನಿಕರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಸರ್ಕಾರ ಒಆರ್‌ಒಪಿ ಜಾರಿಗೊಳಿಸಲು ಒಪ್ಪಿದೆ. ಆದರೆ ಅದರಂತೆ ನಡೆದುಕೊಳ್ಳುತ್ತಿಲ್ಲ. ಹೀಗಾಗಿ ದೇಶಾದ್ಯಂತ ಎಲ್ಲಾ ಮಾಜಿ ಸೈನಿಕರು ನವೆಂಬರ್ 9 ಮತ್ತು 10ರಂದು ಶಿಸ್ತುಬದ್ಧವಾಗಿ ತಮ್ಮ ತಮ್ಮ ಜಿಲ್ಲಾಧಿಕಾರಿಗಳಿಗೆ ಪದಕಗಳನ್ನು ವಾಪಸ್ ನೀಡಿ ಪ್ರತಿಭಟಿಸಬೇಕು ಎಂದು ಗಾಂಧಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT