ಕೇರಳದ ಪ್ರೊಫೆಸರ್ ಟಿಜೆ ಜಾಸೆಫ್ 
ದೇಶ

ಕೇರಳ ಫ್ರೊಫೆಸರ್‌ನ ಕೈ ಕತ್ತರಿಸಿದ ಪ್ರಕರಣ: ಶರಣಾದ ಪ್ರಮುಖ ಆರೋಪಿ

ಕೇರಳದ ಪ್ರೊಫೆಸರ್ ಟಿಜೆ ಜಾಸೆಫ್ ಅವರ ಕೈ ಕತ್ತರಿಸಿದ ಪ್ರಕರಣದ ಪ್ರಮುಖ ಆರೋಪಿ ಎಂ.ಕೆ. ನಾಸರ್ ಎರ್ನಾಕುಳಂನಲ್ಲಿರುವ ರಾಷ್ಟ್ರೀಯ ತನಿಖಾ ದಳ...

ತಿರುವನಂತಪುರಂ: 2010 ಇಸ್ವಿಯಲ್ಲಿ ಕೇರಳದ ಪ್ರೊಫೆಸರ್ ಟಿಜೆ ಜಾಸೆಫ್ ಅವರ ಕೈ ಕತ್ತರಿಸಿದ ಪ್ರಕರಣದ ಪ್ರಮುಖ ಆರೋಪಿ ಎಂ.ಕೆ. ನಾಸರ್ ಎರ್ನಾಕುಳಂನಲ್ಲಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ)ನ್ಯಾಯಾಲಯದಲ್ಲಿ ಶುಕ್ರವಾರ ಶರಣಾಗಿದ್ದಾರೆ.
ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಾಲಯ ಮೇ 8, 2015ರಂದು 10 ಮಂದಿಗೆ 8 ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. 
ಈ ಪ್ರಕರಣದಲ್ಲಿ  37 ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು.
2010 ಜುಲೈ 5 ರಂದು ನಾಸರ್ ಸೇರಿದಂತೆ ಇತರ ಆರೋಪಿಗಳು ಪ್ರೊಫೆಸರ್. ಟಿಜೆ ಜೋಸೆಫ್ ಮೇಲೆ ಹಲ್ಲೆ ನಡೆಸಿದ್ದರು. ವ್ಯಾನ್‌ನಲ್ಲಿ ಬಂದ ಈ ಗುಂಪು ಇಗರ್ಜಿಗೆ ಹೋಗಿ ಬರುತ್ತಿದ್ದ ಜೋಸೆಫ್ ಅವರ ಕಾರನ್ನು ಮನೆಯ ಪಕ್ಕದಲ್ಲಿ ಅಡ್ಡಗಟ್ಟಿ ಗ್ಲಾಸ್ ಒಡೆದು, ಹೊರಗೆಳೆದು ಹಲ್ಲೆ ನಡೆಸಿದ್ದರು.  ಕಾರಿನಲ್ಲಿದ್ದ ಜೋಸೆಫ್ ಅವರ ಅಮ್ಮ ಏಲಿ ಕುಟ್ಟಿ, ಸಹೋದರಿ ಸಿಸ್ಟರ್ ಮೇರಿ ಸ್ಟೆಲ್ಲಾ ಅವರನ್ನು  ತಡೆ ಹಿಡಿದು, ಜೋಸೆಫ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು. ಆಮೇಲೆ ರೋಡಿನಲ್ಲಿ ಮಲಗಿಸಿ ಕೊಡಲಿಯಿಂದ ಅವರ ಕೈ ಕತ್ತರಿಸಲಾಗಿತ್ತು.
ಪ್ರಮುಖ ಆರೋಪಿಯಾಗಿರುವ ನಾಸರ್ ಈ ಘಟನೆ ನಡೆದ ವೇಳೆ ಪಾಪ್ಯುಲರ್ ಫ್ರಂಟ್‌ನ ಜಿಲ್ಲಾ ಪದಾಧಿಕಾರಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT