ಸಾಹಿತಿ ದೇವನೂರು ಮಹಾದೇವ (ಸಂಗ್ರಹ ಚಿತ್ರ) 
ದೇಶ

ಆಂಜನೇಯ ಬೆಲೆ ತೆರಲೇಬೇಕು: ದೇವನೂರು ಮಹಾದೇವ

ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಲಂಚ ಪ್ರಕರಣದ ಸಂಬಂಧ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಬೆಲೆ ತೆರಲೇಬೇಕು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲಿ...

ಬೆಂಗಳೂರು: ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಲಂಚ ಪ್ರಕರಣದ ಸಂಬಂಧ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಬೆಲೆ ತೆರಲೇಬೇಕು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲಿ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಸುದ್ದಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಸಚಿವ ಆಂಜನೇಯ ಅವರ ಪತ್ನಿ ವಿಜಯಾ ಅವರು ಲಂಚ ಪ್ರಕರಣದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಹಾದೇವ ಅವರು, “ಆಂಜನೇಯ ಅವರು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲಿ" ಎಂದು ಹೇಳಿದ್ದಾರೆ. “ಈಗಾಗಿರುವ ತಪ್ಪಿನಿಂದ ಸಚಿವ ಆಂಜನೇಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದಕ್ಕೆ ಅವರು ಬೆಲೆ ತೆರಲೇಬೇಕು. ಇಷ್ಟರಲ್ಲೇ ಆಗಿದ್ದು ತುಂಬಾ ನೋವು ತಂದಿದೆ. ಆರೋಪ ಮತ್ತು ಅಪಮಾನವನ್ನು ಎದುರಿಸುವುದನ್ನು ಬಿಟ್ಟರೆ ಅವರಿಗೆ ಬೇರೆ ದಾರಿಯೇ ಇಲ್ಲ. ಸಚಿವ ಆಂಜನೇಯ ರಾಜಿನಾಮೆ ಕೊಡುವುದು ಅವರ ಆತ್ಮಸಾಕ್ಷಿಗೆ ಬಿಟ್ಟದ್ದು, ಜತೆಗೆ ಮುಖ್ಯಮಂತ್ರಿ ವಿವೇಚನೆಗೆ ಸೇರಿದ್ದು, ಸಾರ್ವಜನಿಕವಾಗಿ ಸಂಪುಟದಲ್ಲಿ ಉಳಿಸಿ ಎಂದು ಹೇಳುವುದು ತಪ್ಪು", ಎಂದಿದ್ದಾರೆ.

“ಆಂಜನೇಯ ತುಂಬಾ ಇಷ್ಟವಾದ ವ್ಯಕ್ತಿ. ಅವರೊಬ್ಬ ತುಂಬಾ ಸರಳ, ಹುಂಬ; ಉತ್ಸಾಹ ಜಾಸ್ತಿ. ಸಾಮಾಜಿಕ ಕಾಳಜಿ ಇಟ್ಟುಕೊಂಡಿದ್ದರೂ ಏಕೆ ಹೀಗಾಯಿತು? ನಿಜಕ್ಕೂ ವಿಷಾದ  ವ್ಯಕ್ತಪಡಿಸುತ್ತೇನೆ", ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT