ಸಾಹಿತಿ ದೇವನೂರು ಮಹಾದೇವ (ಸಂಗ್ರಹ ಚಿತ್ರ) 
ದೇಶ

ಆಂಜನೇಯ ಬೆಲೆ ತೆರಲೇಬೇಕು: ದೇವನೂರು ಮಹಾದೇವ

ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಲಂಚ ಪ್ರಕರಣದ ಸಂಬಂಧ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಬೆಲೆ ತೆರಲೇಬೇಕು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲಿ...

ಬೆಂಗಳೂರು: ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಲಂಚ ಪ್ರಕರಣದ ಸಂಬಂಧ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಬೆಲೆ ತೆರಲೇಬೇಕು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲಿ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಸುದ್ದಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಸಚಿವ ಆಂಜನೇಯ ಅವರ ಪತ್ನಿ ವಿಜಯಾ ಅವರು ಲಂಚ ಪ್ರಕರಣದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಹಾದೇವ ಅವರು, “ಆಂಜನೇಯ ಅವರು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲಿ" ಎಂದು ಹೇಳಿದ್ದಾರೆ. “ಈಗಾಗಿರುವ ತಪ್ಪಿನಿಂದ ಸಚಿವ ಆಂಜನೇಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದಕ್ಕೆ ಅವರು ಬೆಲೆ ತೆರಲೇಬೇಕು. ಇಷ್ಟರಲ್ಲೇ ಆಗಿದ್ದು ತುಂಬಾ ನೋವು ತಂದಿದೆ. ಆರೋಪ ಮತ್ತು ಅಪಮಾನವನ್ನು ಎದುರಿಸುವುದನ್ನು ಬಿಟ್ಟರೆ ಅವರಿಗೆ ಬೇರೆ ದಾರಿಯೇ ಇಲ್ಲ. ಸಚಿವ ಆಂಜನೇಯ ರಾಜಿನಾಮೆ ಕೊಡುವುದು ಅವರ ಆತ್ಮಸಾಕ್ಷಿಗೆ ಬಿಟ್ಟದ್ದು, ಜತೆಗೆ ಮುಖ್ಯಮಂತ್ರಿ ವಿವೇಚನೆಗೆ ಸೇರಿದ್ದು, ಸಾರ್ವಜನಿಕವಾಗಿ ಸಂಪುಟದಲ್ಲಿ ಉಳಿಸಿ ಎಂದು ಹೇಳುವುದು ತಪ್ಪು", ಎಂದಿದ್ದಾರೆ.

“ಆಂಜನೇಯ ತುಂಬಾ ಇಷ್ಟವಾದ ವ್ಯಕ್ತಿ. ಅವರೊಬ್ಬ ತುಂಬಾ ಸರಳ, ಹುಂಬ; ಉತ್ಸಾಹ ಜಾಸ್ತಿ. ಸಾಮಾಜಿಕ ಕಾಳಜಿ ಇಟ್ಟುಕೊಂಡಿದ್ದರೂ ಏಕೆ ಹೀಗಾಯಿತು? ನಿಜಕ್ಕೂ ವಿಷಾದ  ವ್ಯಕ್ತಪಡಿಸುತ್ತೇನೆ", ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!