ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಪ್ರಶಸ್ತಿ ಹಿಂತಿರುಗಿಸಿದವರನ್ನು ಚರ್ಚೆಗೆ ಆಹ್ವಾನಿಸುವೆ: ರಾಜನಾಥ್ ಸಿಂಗ್

ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಸಾಹಿತಿಗಳು ತಮ್ಮ ಪ್ರಶಸ್ತಿ ಹಿಂತಿರುಗಿಸುತ್ತಿರುವುಕ್ಕೆ ಅವರನ್ನು...

ನವದೆಹಲಿ: ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಸಾಹಿತಿಗಳು ತಮ್ಮ ಪ್ರಶಸ್ತಿ ಹಿಂತಿರುಗಿಸುತ್ತಿರುವುಕ್ಕೆ ಅವರನ್ನು ಕರೆದು ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಸಾಹಿತಿಗಳು ಮತ್ತು ಬುದ್ಧಿಜೀವಿಗಳು ಪ್ರಶಸ್ತಿಗಳನ್ನು ಹಿಂತಿರುಗಿಸುವುದಕ್ಕೆ ಏನು ಕಾರಣ ಎಂಬುದು ಗೊತ್ತಾಗುತ್ತಿಲ್ಲ. ಗೃಹ ಸಚಿವನಾಗಿ ನಾನು ಅವರನ್ನು ಕರೆದು ಮಾತುಕತೆ ನಡೆಸುತ್ತೇನೆ. ನನಗೆ ಕಾರಣ ಗೊತ್ತಾಗಬೇಕಿದೆ ಎಂದು ಹೇಳಿದರು.

ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ಇದ್ದರೆ ಅದಕ್ಕೆ ಏನು ಕಾರಣ ಎಂಬುದನ್ನು ಬುದ್ಧಿಜೀವಿಗಳಿಂದ ಕೇಳಿ ತಿಳಿದುಕೊಂಡು ಆ ಸಮಸ್ಯೆಯನ್ನು ಹೇಗೆ ಬಗೆಹರಿಸಿಕೊಳ್ಳಬಹುದು ಎಂಬ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂದರು.

ಇದುವರೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಸಾಹಿತಿಗಳು, ಇತಿಹಾಸಕಾರರು, ಸಿನಿಮಾ ಕಲಾವಿದರು, ವಿಜ್ಞಾನಿಗಳು ಸೇರಿದಂತೆ ಸುಮಾರು 75 ಮಂದಿ ತಮ್ಮ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ. ಧಾರ್ಮಿಕ ಅಸಹಿಷ್ಣುತೆಯನ್ನು ವಿರೋಧಿಸಿ ಪ್ರಶಸ್ತಿ ವಾಪ್ಸಿ ಎಂಬ ಅಭಿಯಾನವೇ ಆರಂಭಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT